19.1 C
Sidlaghatta
Sunday, February 22, 2026

ರೈತರ ಉತ್ಪನ್ನಗಳಿಗೆ ತೆರಿಗೆಯನ್ನು ವಿಧಿಸಬಾರದು

- Advertisement -
- Advertisement -

ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಿಂದ ವಾರದ ಸಂತೆಗೆ ರೈತರು ಉತ್ಪಾದನೆ ಮಾಡಿ ತರುವಂತಹ ತರಕಾರಿಗಳು ಹಾಗೂ ವಿವಿಧ ಉತ್ಪನ್ನಗಳಿಗೆ ತೆರಿಗೆಯನ್ನು ವಿಧಿಸಬಾರದು ಎಂದು ರೈತ ಸಂಘದ ಪದಾಧಿಕಾರಿಗಳು ನಗರಸಭೆಯ ಆಯುಕ್ತರಿಗೆ ಬುಧವಾರ ಮನವಿ ಪತ್ರವನ್ನು ಸಲ್ಲಿಸಿದರು.
ನಗರದ ನಗರಸಭೆಯ ಕಾರ್ಯಾಲಯದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಅವರು, ತಾಲ್ಲೂಕಿನ ವಿವಿಧ ಭಾಗಗಳಿಂದ ರೈತರು ತೀವ್ರ ಸಂಕಷ್ಟದಲ್ಲಿಯೂ ಕೂಡಾ ಬೆಳೆಗಳನ್ನು ಬೆಳೆದು ಮಾರುಕಟ್ಟೆಗೆ ತೆಗೆದುಕೊಂಡು ಬಂದರೂ ಅವರರ ಶ್ರಮಕ್ಕೆ ತಕ್ಕಂತೆ ಬೆಲೆಗಳು ಲಭ್ಯವಾಗುತ್ತಿಲ್ಲ. ಬೆಳೆಗಳಿಂದ ಬಂದಂತಹ ಹಣವನ್ನು ಕೂಲಿಕಾರ್ಮಿಕರಿಗೆ ಹೊಂದಿಸಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ಕಡೆಯಲ್ಲಿ ತೋಟಗಾರಿಕಾ ಬೆಳೆಗಳಿಗೆ ಉಪಯೋಗಿಸುತ್ತಿರುವ ಔಷಧಿಗಳ ಬೆಲೆಗಳು ಏರಿಕೆಯಾಗಿವೆ. ಕಳಪೆ ಬಿತ್ತನೆ ಬೀಜಗಳಿಂದಲೂ ನಷ್ಟವನ್ನು ಅನುಭವಿಸುವಂತಾಗಿದ್ದು, ನಗರದಲ್ಲಿ ವಾರಕ್ಕೊಮ್ಮೆ ನಡೆಯುವಂತಹ ಸಂತೆಯಲ್ಲಿ ರೈತರ ಉತ್ಪನ್ನಗಳಿಗೆ ತೆಗೆದುಕೊಳ್ಳುತ್ತಿರುವ ತೆರಿಗೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಮನವಿಯನ್ನು ಸ್ವೀಕರಿಸಿದ ನಗರಸಭೆಯ ವ್ಯವಸ್ಥಾಪಕ ಮಂಜುನಾಥ್, ಮನವಿಯನ್ನು ಆಯುಕ್ತರ ಗಮನಕ್ಕೆ ತಂದು ರೈತರ ಸಂಕಷ್ಟದ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರುಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ಆನೂರು ದೇವರಾಜ್, ಮೂರ್ತಿ, ಅಶ್ವಥ್ಥನಾರಾಯಣಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!