20.1 C
Sidlaghatta
Wednesday, November 26, 2025

ವಕೀಲರ ತರಬೇತಿ ಕಾರ್ಯಾಗಾರ

- Advertisement -
- Advertisement -

ದೇಶದ ಇಡೀ ವ್ಯವಸ್ಥೆ ಸಂವಿಧಾನದಡಿ ನಡೆಯುತ್ತಿದ್ದು ಸಂವಿದಾನದ ಆಶಯದಂತೆ ಶಾಸಕಾಂಗ, ಕಾರ್ಯಾಂಗ ಹಾಗು ನ್ಯಾಯಾಂಗ ಕಾರ್ಯ ನಿರ್ವಹಿಸುತ್ತದೆ ಎಂದು ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ಹೇಳಿದರು.
ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗು ತಾಲೂಕು ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಸಂವಿಧಾನ ದಿನಾಚರಣೆ ಮತ್ತು ಪ್ಯಾನಲ್ ವಕೀಲರು ಹಾಗು ಸ್ವಯಂ ಪ್ರೇರಿತ ಸಹಾಯಕರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರಾಷ್ಟ್ರಪತಿ ಹಾಗು ರಾಜ್ಯಪಾಲರ ಸೂಚನೆಯ ಮೇರೆಗೆ ಸಂವಿಧಾನದನ್ವಯ ಇರುವ ಕಾನೂನುಗಳನ್ನು ಜಾರಿಗೆ ತರುತ್ತಾರೆ. ಕೆಲವೊಮ್ಮೆ ತುರ್ತು ಕಾನೂನು ರೂಪಿಸಲು ಸರ್ಕಾರಗಳಿಗೆ ಅವಕಾಶವಿದೆಯಾದರೂ ನಂತರ ರಾಷ್ಟ್ರಪತಿ ಹಾಗು ರಾಜ್ಯಪಾಲರ ಅನುಮತಿ ಪಡೆಯಬೇಕಾಗುತ್ತದೆ ಎಂದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ ಮಾತನಾಡಿ, ನಾವು ಹುಟ್ಟುತ್ತಾ ಕಾನೂನಿನಡಿ ಹುಟ್ಟುತ್ತೇವೆ. ಹಾಗೆಯೇ ಸಾಯುತ್ತಾ ಕಾನೂನಿನಡಿ ಸಾಯುತ್ತೇವೆ. ಕಟ್ಟಕಡೆಯ ವ್ಯಕ್ತಿಗೂ ಕೂಡ ಎಲ್ಲಾ ಮೂಲಭೂತ ಸವಲತ್ತುಗಳು ಸಿಗಬೇಕು ಎನ್ನುವ ನಿಟ್ಟಿನಲ್ಲಿ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ದ್ಯೇಯದೊಂದಿಗೆ ರಚಿಸಲಾಘಿರುವ ಸಂವಿದಾನವನ್ನು ಎಲ್ಲರೂ ಗೌರವಿಸಬೇಕು ಎಂದರು.
ಹಿರಿಯ ವಕೀಲ ವಿ.ಸುಬ್ರಮಣ್ಯಪ್ಪ ಸ್ವಯಂ ಪ್ರೇರಿತ ಸಹಾಯಕರ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಮಾತನಾಡಿದರು. ವಕೀಲರಾದ ಸಿ.ಲಕ್ಷ್ಮಮ್ಮ ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಬಗ್ಗೆ ಮಾತನಾಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ಎ.ಶ್ರೀಕಂಠ, ಸಿವಿಲ್ ನ್ಯಾಯಾಧೀಶ ಸಂದೀಶ್.ಟಿ.ಎಲ್. ಸಹಾಯಕ ಸರ್ಕಾರಿ ಅಭಿಯೋಜಕಿ ಎಸ್.ಕುಮುದಿನಿ, ವಕೀಲರಾದ ಬೈರಾರೆಡ್ಡಿ, ಯಣ್ಣಂಗೂರು ಕೆ.ಮಂಜುನಾಥ್, ಎಸ್.ಎನ್.ಚಂದ್ರಶೇಖರ್, ಆರ್.ವಿ.ವೀಣಾ, ನಾಗೇಂದ್ರಬಾಬು, ಮುನಿರಾಜು, ಗೀತ ಇದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!