27.1 C
Sidlaghatta
Friday, March 29, 2024

ವದಂತಿಗಳಿಗೆ ಕಿವಿಗೊಡಬೇಡಿ, ನಾನೇ ಜೆಡಿಎಸ್ ಅಧಿಕೃತ ಅಭ್ಯರ್ಥಿ:ಶಾಸಕ ಎಂ.ರಾಜಣ್ಣ

- Advertisement -
- Advertisement -

ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬದಲಾಗುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುವದಂತಿಗಳನ್ನು ಹರಡಲಾಗುತ್ತಿದೆ. ಜೆಡಿಎಸ್ ಪಕ್ಷದ ವರಿಷ್ಠರು ಹಾಗೂ ರಾಜ್ಯಾಧ್ಯಕ್ಷರು ಪಟ್ಟಿಯಲ್ಲಿ ನನ್ನ ಹೆಸರನ್ನು ಘೋಷಣೆ ಮಾಡಿದ್ದಾರೆ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗದೆ ವದಂತಿಗಳನ್ನು ಕಡೆಗಣಿಸಬೇಕು ಎಂದು ಶಾಸಕ ಎಂ.ರಾಜಣ್ಣ ಮನವಿ ಮಾಡಿದರು.
ನಗರದ ಪ್ರವಾಸಿಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮತದಾರರ ಮತ ಅವರವರ ಹಕ್ಕು ಮತ್ತು ಆಸ್ತಿ. ಅವರ ಒಲವಿದ್ದೆಡೆ ಅವರ ಆಯ್ಕೆ ಇರುತ್ತದೆ. ಆದರೆ ಮತದಾರರನ್ನು ತಪ್ಪುದಾರಿಗೆಳೆಯುವ, ಅನಾರೋಗ್ಯಕರ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಬಾರದು. ಜನಪ್ರತಿನಿಧಿಗಳನ್ನು ಕೀಳು ಅಭಿರುಚಿಯಲ್ಲಿ ಚಿತ್ರಿಸುವುದನ್ನು ನಾನು ಖಂಡಿಸುತ್ತೇನೆ. ಯಾವುದೂ ಶಾಶ್ವತವಲ್ಲ, ಸತ್ಯವನ್ನು ಹೇಳಲಿ. ‘ಪ್ರೀತಿ ಅಕಾರಣವಾಗಿರಲಿ ದ್ವೇಷ ಸಕಾರಣವಾಗಿರಲಿ’ ಎಂದು ಹೇಳಿದರು.
ಯಾವುದೇ ಪಕ್ಷದಲ್ಲಿ ಆಕಾಂಕ್ಷಿಗಳಿರುವುದು ತಪ್ಪಲ್ಲ, ಆದರೆ ಎಲ್ಲರೂ ಪಕ್ಷದ ಸಿದ್ಧಾಂತಗಳಿಗೆ, ವ್ಯವಸ್ಥೆಗೆ ಕಟಿಬದ್ಧರಾಗಿರಬೇಕು. ಐದು ವರ್ಷದಲ್ಲಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದೇನೆ. ನಮ್ಮ ಪಕ್ಷದ ಇನ್ನೊಂದು ಬಣ ಸಭೆ ನಡೆಸಿದ್ದಾರೆ. ಸಂತೋಷ. ಎಲ್ಲರನ್ನೂ ಭೇಟಿ ಮಾಡುತ್ತೇನೆ. ಕ್ಷೇತ್ರವೆಲ್ಲಾ ಸುತ್ತಾಡಿ ಜನರನ್ನು ಒಗ್ಗೂಡಿಸುತ್ತೇನೆ ಎಂದರು.
ಬುಧವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಭೆ ಮಾಡಿ, ಘೋಷಣೆ ಮಾಡಿರುವ ಪ್ರತಿಯೊಬ್ಬ ಅಭ್ಯರ್ಥಿಗಳನ್ನು ಕರೆಯಿಸಿ ಕ್ಷೇತ್ರಗಳ ಕುರಿತು ಚರ್ಚೆ ನಡೆಸಿ, ಮಾರ್ಗದರ್ಶನ ಮಾಡಿದ್ದಾರೆ. ಅದರೂ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ.
ಪಕ್ಷದ ನಿಯಮಗಳ ಅನುಸಾರವಾಗಿ ಹೋಗಬೇಕು. ಅಧಿಕಾರ ಯಾರಿಗೂ ಶಾಶ್ವತವಲ್ಲ, ಜನರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಕ್ಷೇತ್ರದಲ್ಲಿ ಅಸಮಾಧಾನಗೊಂಡಿರುವ ಮುಖಂಡರನ್ನು ಭೇಟಿ ಮಾಡಿ, ಪಕ್ಷ ಸಂಘಟನೆಗೆ ಭಾನುವಾರದಿಂದ ಚಾಲನೆ ನೀಡಲಿದ್ದೇವೆ. ಪೊಲೀಸರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಪಡಿಸಿಕೊಳ್ಳುವವರ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡುತ್ತೇವೆ. ಶಾಸಕರನ್ನು ಆಯ್ಕೆ ಮಾಡುವುದು ಮತದಾರರು, ಇದನ್ನು ಮರೆತು ಕೀಳು ಮಾತಾಡುವುದು, ಪರಿಹಾಸ್ಯ ಮಾಡುವುದು ಸರಿಯಲ್ಲ, ಆರೋಗ್ಯಕರವಾದ ಚರ್ಚೆಗೆ ಬರಲಿ, ಬದಲಾವಣೆಯ ಪ್ರಶ್ನೆಯೆ ಇಲ್ಲ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಾ.ಧನಂಜಯರೆಡ್ಡಿ ಮಾತನಾಡಿ, ಯಲಹಂಕದ ನಿಟ್ಟೆ ಕಾಲೇಜಿನ ಸಮೀಪದಲ್ಲಿ ಇದೇ ೧೭ ರಂದು ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಅದರಲ್ಲಿ ಕ್ರಮ ಸಂಖ್ಯೆ ೭೭ ರಲ್ಲಿ ಶಾಸಕ ಎಂ.ರಾಜಣ್ಣ ಅವರ ಹೆಸರು ನಮೂದು ಮಾಡಿದ್ದಾರೆ.
ಬುಧವಾರ ಖಾಸಗಿ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿರುವ ಸುದ್ದಿಗಳಲ್ಲಿ ಶಿಡ್ಲಘಟ್ಟದ ಪ್ರಸ್ತಾಪವೇ ಆಗಿಲ್ಲ, ಸುದ್ದಿಗಳ ವಿಡಿಯೋಗಳನ್ನು ಬಳಕೆ ಮಾಡಿಕೊಂಡು, ಮೊಬೈಲ್ ಗಳಲ್ಲಿ ತಪ್ಪು ಮಾಹಿತಿ ಟೈಪ್ ಮಾಡಿ, ಹರಿಯಬಿಟ್ಟು, ವಿನಾಕಾರಣ ಕ್ಷೇತ್ರದ ನಿಷ್ಠಾವಂತ ಕಾರ್ಯಕರ್ತರಲ್ಲಿ ಗೊಂದಲಮೂಡಿಸಲಾಗುತ್ತಿದೆ ಎಂದರು.
ಮುಖಂಡರಾದ ಕನಕಪ್ರಸಾದ್, ರಹಮತ್ತುಲ್ಲಾ, ಸುರೇಂದ್ರಗೌಡ, ಗುಮ್ಮರೆಡ್ಡಿ, ಲಕ್ಷ್ಮೀನಾರಾಯಣ(ಲಚ್ಚಿ), ಮುರಳಿ, ಆಂಜಿನಪ್ಪ, ದೇವು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!