27 C
Sidlaghatta
Sunday, February 22, 2026

ವಾಗ್ಗೇಯಕಾರರ ಆರಾಧನಾ ಮಹೋತ್ಸವ

- Advertisement -
- Advertisement -

ನಗರದ ಕಾಳಿಕಾಂಬ ಕಮಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಭಾನುವಾರ ಮಯೂರಿ ನಾಟ್ಯಕಲಾ ಕೇಂದ್ರದಿಂದ ಪುರಂದರದಾಸರು, ತ್ಯಾಗರಾಜರು, ಕನಕದಾಸರು, ವಾಗ್ಗೇಯಕಾರರ ಆರಾಧನಾ ಮಹೋತ್ಸವ ಹಾಗೂ ನಟರಾಜೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮಯೂರಿ ನಾಟ್ಯಕಲಾ ಕೇಂದ್ರದ ವಿದ್ಯಾರ್ಥಿಗಳು ಶಾಸ್ತ್ರೀಯ ನೃತ್ಯ ಮತ್ತು ಶಾಸ್ತ್ರೀಯ ಸಂಗೀತ, ಲಘು ಸಂಗೀತ, ವೀಣೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ವಾನ್ ಚಿಂತಲಪಲ್ಲಿ ಸೋಮಶೇಖರ್ ತಂಡ ವಾದ್ಯವೃಂದದ ಸಹಕಾರ ನೀಡಿದರು.
‘ಸುಮಾರು ಹತ್ತು ವರ್ಷಗಳಿಂದಲೂ ಪ್ರತಿ ವರ್ಷ ವಾಗ್ಗೇಯಕಾರರ ಆರಾಧನಾ ಮಹೋತ್ಸವ ಹಾಗೂ ನಟರಾಜೋತ್ಸವ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಸಂಗೀತ ಮತ್ತು ನೃತ್ಯವನ್ನು ಕಲಿತ ವಿದ್ಯಾರ್ಥಿಗಳಿಗೆ ವಿದ್ಯೆಯನ್ನು ಪ್ರದರ್ಶಿಸಲು ಇದೊಂದು ಅವಕಾಶವಾಗಿದೆ. ಕಲಾಸಕ್ತರು ಆಗಮಿಸಿ ಈ ಕಾರ್ಕ್ರಮದಲ್ಲಿ ಮಕ್ಕಳ ಕಲೆಯನ್ನು ನೋಡಿ ಪ್ರೋತ್ಸಾಹಿತ್ತಿದ್ದಾರೆ’ ಎಂದು ಮಯೂರಿ ನಾಟ್ಯಕಲಾ ಕೇಂದ್ರದ ಅಧ್ಯಕ್ಷೆ ವಿದುಷಿ ಎಸ್.ವಿ.ಭಾಗ್ಯಲಕ್ಷ್ಮಿ ಅಯ್ಯರ್ ತಿಳಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!