ತಾಲ್ಲೂಕಿನ ನಾಗಮಂಗಲ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಗ್ರಾಮಸ್ಥರಿಗೆ ಅರಿವು ಮೂಡಿಸುವ ‘ವಾರದ ಒಣಗಲು ದಿನ’ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು.
ಆರೋಗ್ಯ ಇಲಾಖೆ, ಅಂಗನವಾಡಿ, ಗ್ರಾಮ ಪಂಚಾಯತಿ, ಸರ್ಕಾರಿ ಶಾಲೆಯ ಸಹಯೋಗದಲ್ಲಿ ನಡೆದ ಅರಿವು ಕಾರ್ಯಕ್ರಮದಲ್ಲಿ ಡೆಂಗ್ಯೂ ಮತ್ತು ಚಿಕುಂಗುನ್ಯ ರೋಗ ನಿಯಂತ್ರಣದ ಬಗ್ಗೆ ಗ್ರಾಮದಲ್ಲಿ ಜಾಥಾ ನಡೆಸಿ ತಿಳಿವು ಮೂಡಿಸಲಾಯಿತು.
‘ಮನೆಗಳ ಬಳಿ ನೀರು ಶೇಖರಿಸಿಟ್ಟುಕೊಳ್ಳುವ ಪಾತ್ರೆ ಹಾಗೂ ಡ್ರಮ್ಮುಗಳು ಸೊಳ್ಳೆಗಳ ಲಾರ್ವಾ ಬೆಳೆಯುವ ತಾಣಗಳಾಗದಂತೆ ಗಮನಹರಿಸಬೇಕು. ವಾರಕ್ಕೊಮ್ಮೆ ನೀರಿನ ಡ್ರಮ್ಮುಗಳನ್ನು ಖಾಲಿ ಮಾಡಿ ಬಿಸಿಗೆ ಒಣಗಿಸುವ ಮೂಲಕ ಲಾರ್ವಾ ಉತ್ಪತ್ತಿಗೆ ಕಡಿವಾಣ ಹಾಕಬಹುದು. ಮನೆಗಳ ಬಳಿ ಟೈರ್ ಮುಂತಾದ ನೀರು ನಿಲ್ಲುವ ತಾಣಗಳನ್ನು ಗಮನಿಸಿ ಶುಭ್ರಗೊಳಿಸಬೇಕು. ಇದರಿಂದ ಸೊಳ್ಳೆಗಳ ಉತ್ಪತ್ತಿ ನಿಲ್ಲುತ್ತದೆ. ಸೊಳ್ಳೆ ಪರದೆ ಬಳಸಬೇಕು’ ಎಂದು ಈ ಸಂದರ್ಭದಲ್ಲಿ ವೈದ್ಯೆ ಡಾ.ಅಂಬಿಕಾ ತಿಳಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪಾ, ಉಪಾಧ್ಯಕ್ಷ ಎನ್.ಡಿ.ನಾರಾಯಣಪ್ಪ, ಕಾರ್ಯದರ್ಶಿ ಗೋಪಿನಾಥ್, ಭವ್ಯಾ, ಕನಕರತ್ನಮ್ಮ, ಸುಶೀಲಾ, ಪ್ರಭಾವತಿ, ಆಂಜಿನಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -