14.1 C
Sidlaghatta
Wednesday, December 24, 2025

ವಾಲ್ಮೀಕಿಜಯಂತಿ ಕಾರ್ಯಕ್ರಮ

- Advertisement -
- Advertisement -

ಯಾವುದೇ ಕೆಲಸವನ್ನು ಸತತ ಪರಿಶ್ರಮದಿಂದ ಸಾಧಿಸಿದರೆ ಜಗತ್ತಿನಲ್ಲಿ ಎಲ್ಲವೂ ಸಾಧ್ಯ ಎಂಬುದನ್ನು ಇಡೀ ಜಗತ್ತಿಗೆ ತಮ್ಮ ಮೊಟ್ಟಮೊದಲ ರಾಮಾಯಣ ಕೃತಿಯಿಂದ ಸಾರಿ ಹೇಳಿದ ಮಹರ್ಷಿ ವಾಲ್ಮೀಕಿಯವರು ಜಗತ್ತಿನ ಎಲ್ಲರಿಗೂ ಮಾದರಿಯಾಗಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಮಹರ್ಷಿ ವಾಲ್ಮೀಕಿಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಕೃತಿಯಲ್ಲಿ ಪ್ರತಿಯೊಬ್ಬ ಮನುಷ್ಯ ತನ್ನ ಜೀವನದ ಮೌಲ್ಯ ಅರಿಯುವುದರ ಜೊತೆಗೆ ಗುರುಭಕ್ತಿ, ದೇಶಪ್ರೇಮ, ಸಂಬಂಧಗಳ ಮಹತ್ವ, ತಮ್ಮ ಜವಾಬ್ದಾರಿಗಳನ್ನರಿತು ಜೀವನ ನಡೆಸಲು ಸೂಚಿಸುವಂತಿದೆ ಎಂದರು.
ಜೀವನದ ಮೌಲ್ಯಗಳನ್ನು ಅರಿತುಕೊಳ್ಳದೆ ಕೇವಲ ಲೋಕದ ಭೋಗಗಳಿಗಾಗಿಯೆ ಜೀವಿಸುತ್ತಿದ್ದ ವ್ಯಕ್ತಿ ತನಗಾದಂತಹ ಮನೋಬದಲಾವಣೆಯಿಂದಾಗಿ ನಡೆಸಿದ ಘೋರ ತಪಸ್ಸಿನಿಂದಾಗಿ ಮುಂದೆ ಮಹರ್ಷಿಗಳಾಗಿ ಜಗತ್ತಿಗೆ ಮೊಟ್ಟಮೊದಲ ಕಾವ್ಯ ರಾಮಾಯಣವನ್ನು ರಚಿಸುವುದರೊಂದಿಗೆ ಆದಿಕವಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದರು.
ತಹಶೀಲ್ದಾರ್ ಅಜಿತ್ಕುಮಾರ್ ರೈ ಮಾತನಾಡಿ, ಬದಲಾವಣೆ ಜಗದ ನಿಯಮ ಜಗದ ಉದ್ದಾರಕ್ಕಾಗಿ ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ವನ್ನು ಪ್ರತಿಯೊಬ್ಬರೂ ಓದುವ ಮೂಲಕ ಗುರು ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕು ಎಂದರು.
ವಾಲ್ಮೀಕಿ ಸಮುದಾಯದ ಮುಖಂಡ ಬಂಕ್ ಮುನಿಯಪ್ಪ, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಕೇಶವರೆಡ್ಡಿ, ನಗರಸಭೆ ಅಧ್ಯಕ್ಷ ಅಪ್ಸರ್ಪಾಷ, ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಮತ್ತಿತರರು ಹಾಜರಿದ್ದರು.
ನಗರ ಸೇರಿದಂತೆ ತಾಲ್ಲೂಕಿನಾಧ್ಯಂತ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು.
ನಗರದ ತಾಲ್ಲೂಕು ಕಚೇರಿ ಸೇರಿದಂತೆ ತಾಲ್ಲೂಕು ಪಂಚಾಯಿತಿ, ವಿವಿಧ ಗ್ರಾಮ ಪಂಚಾಯಿತಿ ಕಾರ್ಯಾಲಯ, ಸರ್ಕಾರಿ ಕಚೇರಿ ಹಾಗು ಶಾಲಾ ಕಾಲೇಜು, ಆಸ್ಪತ್ರೆಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!