28.1 C
Sidlaghatta
Wednesday, February 18, 2026

ವಿದ್ಯಾರ್ಜನೆಗೆ ಪೂರಕ ವಾತಾವರಣ ಅಗತ್ಯ

- Advertisement -
- Advertisement -

ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾರ್ಜನೆಗೆ ಪೂರಕ ವಾತಾವರಣ ಮತ್ತು ಸೌಲಭ್ಯಗಳಲ್ಲಿ ಒದಗಿಸಿದಲ್ಲಿ ಹಲವಾರು ಪ್ರತಿಭೆಗಳು ಹೊರಹೊಮ್ಮುತ್ತವೆ ಎಂದು ಬೆಂಗಳೂರಿನ ಇಂಡಿಯನ್ ಡಿಸೈನ್ಸ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಜಿ.ಎನ್.ನಂದಕುಮಾರ್ ತಿಳಿಸಿದರು.
ತಾಲ್ಲೂಕಿನ ಕದಿರಿನಾಯಕನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಇಂಡಿಯನ್ ಡಿಸೈನ್ಸ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಉದ್ಯೋಗಿಗಳು ನೀಡಿರುವ 15 ಡೆಸ್ಕ್ಗಳು, 1000 ಪುಸ್ತಕಗಳನ್ನು ನೀಡಿ ಅವರು ಮಾತನಾಡಿದರು.
ಶಾಲೆಯ ಕಟ್ಟಡದ ಕೆಲ ನವೀಕರಣ ಕೆಲಸವನ್ನೂ ಮಾಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಅವರ ಕಲಿಕೆಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಇಂಡಿಯನ್ ಡಿಸೈನ್ಸ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಅನ್ಬರಸನ್, ಶಿವಶಂಕರ್, ಸೆಂದಿಲ್ಕುಮಾರ್, ಶ್ರೀನಾಥ್, ಜಿ.ಎನ್.ಗುರುರಾಜ್, ಮುಖ್ಯಶಿಕ್ಷಕಿ ಹಂಸವೇಣಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!