29.1 C
Sidlaghatta
Friday, February 20, 2026

ವಿಧಾನ ಪರಿಷತ್ ಚುನಾವಣೆಯಲ್ಲಿ ಶಿಡ್ಲಘಟ್ಟದ ಪಾತ್ರ ಪ್ರಮುಖ

- Advertisement -
- Advertisement -

ಈ ಭಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರದ ಪಾತ್ರ ಪ್ರಮುಖವಾದದ್ದು ಎಂದು ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನಿಲ್ಕುಮಾರ್ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಮುಖಂಡರ ಹಾಗು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಶಿಡ್ಲಘಟ್ಟ ವಿಧಾನಸಭೆ ಕ್ಷೇತ್ರವೊಂದರಲ್ಲಿಯೇ ೩೩೪ ಕಾಂಗ್ರೆಸ್ ಮತಗಳಿದ್ದು ಎಲ್ಲವೂ ಕಾಂಗ್ರೆಸ್ ಪಕ್ಷದ ಪರವಾಗಿಯೇ ಬೀಳಲಿದೆ. ವಿಧಾನ ಪರಿಷತ್ ಚುನಾವಣೆಯ ನಂತರ ಮುಂದಿನ ದಿನಗಳಲ್ಲಿ ಕೆಪಿಸಿಸಿ ಉಪಾಧ್ಯಕ್ಷರೂ ಆದ ಮಾಜಿ ಸಚಿವ ವಿ.ಮುನಿಯಪ್ಪ ಅವರ ಮಾರ್ಗದರ್ಶನದಲ್ಲಿ ನಡೆಯುವುದಾಗಿ ಹೇಳಿದರು.
ಟಿಕೆಟ್ ಹಂಚಿಕೆಗೂ ಮೊದಲು ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಗೊಂದಲವಿದ್ದುದು ನಿಜವೇ ಆದರೂ ನಾವೆಲ್ಲಾ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವುದರಿಂದ ಪಕ್ಷದ ವರಿಷ್ಠರು ಯಾರಿಗೇ ಸೂಚಿಸುತ್ತಾರೋ ಅವರಿಗೆ ಮತ ಹಾಕುವುದು ನಮ್ಮ ಧರ್ಮ ಎಂದರು.
ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ವಿಧಾನಪರಿಷತ್ತಿನಲ್ಲಿ ಬಹುಮತವಿಲ್ಲದ ಕಾರಣ ಕೆಲವು ವಿಧೇಯಕಗಳು ಮಂಡನೆಯಾಗುತ್ತಿಲ್ಲ ಹಾಗಾಗಿ ೨೫ ಸ್ಥಾನಗಳ ಪೈಕಿ ಕನಿಷ್ಠ ೨೦ ಸ್ಥನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದರೊಂದಿಗೆ ರಾಜ್ಯ ಸರ್ಕಾರವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಮುಖಂಡರಾದ ಸಾದಲಿ ಜೈಪ್ರಕಾಶ್, ಹಂಡಿಗನಾಳ ಮುನಿಕೃಷ್ಣಪ್ಪ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!