29.2 C
Sidlaghatta
Friday, February 20, 2026

ವಿವೇಕಾನಂದರ ವಿಚಾರವನ್ನು ಯುವಕರು ಓದಬೇಕು

- Advertisement -
- Advertisement -

ಇಂದಿನ ಯುವ ಪೀಳಿಗೆ ಸ್ವಾಮಿ ವಿವೇಕಾನಂದರ ಸ್ಫೂರ್ತಿದಾಯಕ ವಿಚಾರಧಾರೆಯಿಂದ ವ್ಯಕ್ತಿತ್ವ ವಿಕಸನ ಹೊಂದಲು ಸಾಧ್ಯವಿದೆ ಎಂದು ವಕೀಲ ರವೀಂದ್ರನಾಥ್ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನೆಹರು ಯುವ ಕೇಂದ್ರ, ಸರ್ವೋದಯ ಸ್ವಯಂ ಸೇವಾ ಸಂಸ್ಥೆ ಮತ್ತು ಎಬಿವಿಪಿ ಸಹಯೋಗದಲ್ಲಿ ನಡೆದ ಸ್ವಾಮಿ ವಿವೇಕಾನಂದರ 153ನೇ ಜಯಂತಿಯ ಪ್ರಯುಕ್ತದ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂದಿನ ಯುವ ಪೀಳಿಗೆಯ ಸರ್ವತೋಮುಖ ಬೆಳವಣಿಗೆಗೆ ಸ್ವಾಮಿ ವಿವೇಕಾನಂದರ ಶ್ರೇಷ್ಠ ಚಿಂತನ ವಿಚಾರಧಾರೆಗಳು ಮತ್ತು ಅವರ ಬಹುಮುಖ ವ್ಯಕ್ತಿತ್ವವನ್ನು ಅರಿಯುವ ಕೆಲಸ ಆಗಬೇಕಿದೆ. ಸ್ವಾಮಿ ವಿವೇಕಾನಂದರ ಉಪದೇಶಗಳಿಂದ ಪ್ರಭಾವಿತರಾದ ಯುವಕರಲ್ಲಿ ಆತ್ಮವಿಶ್ವಾಸ, ಕ್ರಿಯಾಶೀಲತೆ ಹಾಗೂ ಪರಿಪೂರ್ಣ ವ್ಯಕ್ತಿತ್ವವನ್ನು ವಿಕಸಿಸಲು ಸಹಕಾರಿಯಾಗುತ್ತದೆ. ನಮ್ಮ ದೇಶದ ಆಧ್ಯಾತ್ಮಿಕ ಚಿಂತನೆಗಳ ಕುರಿತು ಅವರು ವಿದ್ವತ್ ಪೂರ್ಣವಾಗಿ ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದರ ವಿಚಾರವನ್ನು ಓದುವ ಕೆಲಸ ಯುವಕರು ಶ್ರದ್ಧೆಯಿಂದ ಮಾಡಬೇಕು ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆನಂದ್, ಸರ್ವೋದಯ ಸ್ವಯಂ ಸೇವಾ ಸಂಸ್ಥೆಯ ಕಾರ್ಯದರ್ಶಿ ಕೆ.ನರೇಶ್ ಕುಮಾರ್, ರಾಷ್ಟ್ರೀಯ ಕಾಂಗ್ರೆಸ್ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ಎನ್.ಎಸ್.ಎಸ್ ಘಟಕಾಧಿಕಾರಿ ಎಚ್.ಸಿ.ಮುನಿರಾಜು, ಮಂಜುನಾಥ, ಸುರೇಶ್, ಮಧುಸೂದನ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!