ವಿಶ್ವಕರ್ಮ ಜಯಂತಿಯ ಆಚರಣೆ

- Advertisement -
- Advertisement -

ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದಲ್ಲಿ ಬುಧವಾರ ವಿಶ್ವಕರ್ಮ ಜಯಂತಿಯ ಆಚರಣೆಯ ಅಂಗವಾಗಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ ಹಾಗೂ ಲೇಖನ ಸಾಮಗ್ರಿಯನ್ನೂ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣಾಚಾರಿ ಅವರನ್ನು ಸನ್ಮಾನಿಸಲಾಯಿತು.
‘ತಾಲ್ಲೂಕಿನಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ವಿಶ್ವಕರ್ಮ ಜನಾಂಗದ ಅಭಿವೃದ್ಧಿಗಾಗಿ ಎಲ್ಲಾ ಗ್ರಾಮಗಳಲ್ಲಿರುವ ಜನಾಂಗದವರನ್ನು ಒಗ್ಗೂಡಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜನಾಂಗವು ಅಭಿವೃದ್ಧಿಯತ್ತ ಸಾಗಲು ಪ್ರಯತ್ನಿಸಬೇಕು. ಸರ್ಕಾರದ ಸೌಲಭ್ಯಗಳು ಬಡವರಿಗೆ ತಲುಪಲು ಶ್ರಮಿಸಬೇಕು’ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಡಾ.ಧನಂಜಯರೆಡ್ಡಿ ತಿಳಿಸಿದರು.
ದಿಬ್ಬೂರಹಳ್ಳಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಈಶ್ವರಾಚಾರಿ ಸಂಘದ ಕಟ್ಟಡಕ್ಕೆ ನಿವೇಶನ ನೀಡುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ದಿಬ್ಬೂರಹಳ್ಳಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಾಗದಲ್ಲಿ ನಿವೇಶನ ನೀಡುವುದಾಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಡಾ.ಧನಂಜಯರೆಡ್ಡಿ ಹೇಳಿದರು.
ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸುಂದರಾಚಾರಿ, ಆದಿನಾರಾಯಣಾಚಾರಿ, ಶ್ರೀನಿವಾಸಾಚಾರಿ, ಕೃಷ್ಣಾಚಾರಿ, ಮುನಿರತ್ನಮಾಚಾರಿ, ಗ್ರಾಮ ಪಂಚಾಯತಿ ಸದಸ್ಯರು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!