Home News ವಿಶ್ವಕರ್ಮ ಜಯಂತ್ಯುತ್ಸವ ನವೆಂಬರ್ 26 ರಂದು

ವಿಶ್ವಕರ್ಮ ಜಯಂತ್ಯುತ್ಸವ ನವೆಂಬರ್ 26 ರಂದು

0

ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶಿಡ್ಲಘಟ್ಟದಲ್ಲಿ ವಿಶ್ವಕರ್ಮ ಜಯಂತ್ಯುತ್ಸವವನ್ನು ನವೆಂಬರ್ 26 ರ ಭಾನುವಾರ ಶ್ರೀ ಕಾಳಿಕಾಂಬ ಕಮಠೇಶ್ವರ ಸಮುದಾಯಭವನದಲ್ಲಿ ಆಚರಿಸಲಾಗುತ್ತಿದೆ.
ರಾಜಘಟ್ಟದ ವಿಶ್ವಕುಂಡಲಿ ಯೋಗಾಶ್ರಮದ ಕಾಳೀತನಯ ಶ್ರೀ ಉಮಾಮಹೇಶ್ವರ ತೀರ್ಥ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದು, ಉದ್ಘಾಟನೆಯನ್ನು ಮಾಜಿ ಸಚಿವ ವಿ.ಮುನಿಯಪ್ಪ ಮಾಡಲಿದ್ದಾರೆ. ದೇವರ ಮೆರವಣಿಗೆ, ಧಾರ್ಮಿಕ ಸಭೆ, ಪ್ರತಿಭಾ ಪುರಸ್ಕಾರ, ಗಣ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಸಂಘದ ವತಿಯಿಂದ ತಿಳಿಸಿದ್ದಾರೆ.
 

error: Content is protected !!