22 C
Sidlaghatta
Monday, October 13, 2025

ವಿಶ್ವಮಾನವ ಸಂದೇಶ ಸಾರ್ವಕಾಲಿಕ

- Advertisement -
- Advertisement -

ರಾಷ್ಟ್ರ ಕವಿ ಕುವೆಂಪು ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಮಹಾನ್ ಚೇತನ ಎಂದು ಶಾಸಕ ಎಂ. ರಾಜಣ್ಣ ತಿಳಿಸಿದರು.
ನಾಡಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿಯಲ್ಲಿ ಗುರುವಾರ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ವಿಶ್ವ ಮಾನವ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನಾಚರಣೆಯನ್ನಾಗಿ ಸರ್ಕಾರ ಘೋಷಿಸಿರುವುದು ಸಂತಸದ ವಿಷಯ. ಸಾಹಿತ್ಯ ಲೋಕದಲ್ಲಿ ಕುವೆಂಪು ರವರು ನಡೆದು ಬಂದ ಹಾದಿಯ ಬಗ್ಗೆ ಪ್ರತಿಯೊಬ್ಬ ಸಾರ್ವಜನಿಕರು ತಿಳಿದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ವಿಶ್ವ ಮಾನವ ದಿನ ವನ್ನು ಮತ್ತಷ್ಟು ಅದ್ದೂರಿಯಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸದರು.
ಮುಖ್ಯ ಭಾಷಣಕಾರ ವೆಂಕಟೇಶ್ ಮಾತನಾಡಿ, ಕುವೆಂಪು ಒಬ್ಬ ದಾರ್ಶನಿಕ ಕವಿಯಾಗಿದ್ದು ೨೦ ನೇ ಶತಮಾನವು ಕಂಡ ಅದ್ಬುತ ಪ್ರತಿಭೆ. ತಮ್ಮ ಬಾಲ್ಯದಿಂದಲೇ ಸಾಹಿತ್ಯದ ಬಗ್ಗೆ ಅಪಾರವಾದ ಆಸಕ್ತಿಯನ್ನು ಹೊಂದಿದ್ದ ಅವರು ೧೫ ಪ್ರಕಾರಗಳಲ್ಲಿ ೭೦ಕ್ಕಿಂತ ಹೆಚ್ಚು ಕೃತಿಗಳನ್ನು ರಚಿಸಿದ ಕನ್ನಡದ ಅಗ್ರಮಾನ್ಯ ಕವಿಯಾಗಿದ್ದರು.
ಮಕ್ಕಳಿಂದ ಬುದ್ದಿಜೀವಿಗಳವರೆಗೆ ಅವರ ಮನಸ್ಸನ್ನು ಮಟ್ಟುವ ರೀತಿ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯದಲ್ಲಿ ಸಮಾನತೆಯನ್ನು ಸಾರಿದ ಕುವೆಂಪುರವರಿಗೆ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳು ಬಂದಿವೆ. ಯುಗಪ್ರವರ್ತಕ. ರಸಋಷಿ ಎಂದು ಪ್ರಖ್ಯಾತಿಗೊಂಡಿರುವ ಕುವೆಂಪುರವರ ಹೆಸರು ಎಂದೆಂದಿಗೂ ಅಮರವಾಗಿರುತ್ತದೆ. ಅವರ ವಿಶ್ವಮಾನವ ಸಂದೇಶ ಸಾರ್ವಕಾಲಿಕವಾದುದು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಕುವೆಂಪು ಗಾಯನ ಸ್ವರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ತಹಸೀಲ್ದಾರ್ ವಾಸುದೇವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಸುರೇಶ್‌, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸಿ.ಎಂ.ಗೋಪಾಲ್, ಟೌನ್ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಅಧ್ಯಕ್ಷ ಎನ್.ಕೆ.ಗುರುರಾಜರಾವ್, ಒಕ್ಕಲಿಗೆ ಯುವಸೇನೆಯ ತಾಲ್ಲೂಕು ಅಧ್ಯಕ್ಷ ಜೆ.ವಿ.ವೆಂಕಟಸ್ವಾಮಿ, ನಗರ ಘಟಕದ ಅಧ್ಯಕ್ಷ ಪುರುಷೋತ್ತಮ್, ಮುರಳಿ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!