ವೃತ್ತಿಪರರನ್ನು ಸೃಷ್ಠಿಸುವ ಕೆಲಸ ಹಿರಿಯರು ಮಾಡಬೇಕು

- Advertisement -
- Advertisement -

ವಿಶ್ವಕರ್ಮ ಸಮುದಾಯದವರು ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಅಭಿವೃದ್ದಿ ಹೊಂದಬೇಕು ಎಂದು ಮಾಜಿ ಶಾಸಕ ವಿ.ಮುನಿಯಪ್ಪ ಹೇಳಿದರು.
ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಶ್ರೀ ಕಾಳಿಕಾಂಬ ಕಮಠೇಶ್ವರ ಸಮುದಾಯಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ವಿಶೇಷ ಕುಸುರಿ ಕೌಶಲ ಹೊಂದಿರುವ ವಿಶ್ವಕರ್ಮ ಜನಾಂಗವು ವಿಶ್ವ ಮಾನ್ಯತೆ ಪಡೆದಿದೆ. ವಿಶ್ವಕರ್ಮ ಸಮುದಾಯವು ಚಿನ್ನಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ಪಂಚ ಕಸುಬುಗಳನ್ನು ಮಾಡುವ ಮೂಲಕ ಸಮಾಜಕ್ಕೆ ಅಪಾರ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದರು.

ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವಕರ್ಮ ಜಯಂತ್ಯುತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ದೇವರ ಮೆರವಣಿಗೆ ನಡೆಸÀಲಾಯಿತು.

ಆಧುನಿಕ ಯುಗದಲ್ಲಿ ತಾಂತ್ರಿಕತೆಯನ್ನು ಪರಿಚಯಿಸಿ ಯುವಕರಿಗೆ ವೃತ್ತಿ ಕೌಶಲ್ಯವನ್ನು ಕಲಿಸುವ ಮೂಲಕ ವೃತ್ತಿಪರರನ್ನು ಸೃಷ್ಠಿಸುವ ಕೆಲಸ ಹಿರಿಯರು ಮಾಡಬೇಕು ಎಂದರು.
ರಾಜಘಟ್ಟದ ವಿಶ್ವಕುಂಡಲಿ ಯೋಗಾಶ್ರಮದ ಕಾಳೀತನಯ ಶ್ರೀ ಉಮಾಮಹೇಶ್ವರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಜಯಂತೋತ್ಸವದ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ವಿಶ್ವಕರ್ಮ ಪ್ರತಿಮೆಯನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು.
ವಿಧ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಸೇರಿದಂತೆ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.
ವಿಶ್ವಕರ್ಮ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಅಮರನಾರಾಯಣಚಾರಿ, ಗೌರವಾಧ್ಯಕ್ಷ ಜನಾರ್ಧನಮೂರ್ತಿ, ಕಾಳಿಕಾಂಭ ಕಮ್ಮಠೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಬಿ.ಕೆ.ಮುನಿರತ್ನಾಚಾರ್, ನಗರಸಭೆ ಸದಸ್ಯ ಜೆ.ಎಂ.ಬಾಲಕೃಷ್ಣ, ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಶ್ರೀಧರ್, ಮತ್ತಿತರರು ಹಾಜರಿದ್ದರು.
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!