Home News ವೇದ ಪಾರಾಯಣದ ಅಭಿನಂದನಾ ಸಮಾರಂಭ

ವೇದ ಪಾರಾಯಣದ ಅಭಿನಂದನಾ ಸಮಾರಂಭ

0

ನಗರದ ನಗರೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ವಿಪ್ರ ಪೌರೋಹಿತರ ಮತ್ತು ಆಗಮೀಕರ ವಿಶ್ವಸ್ಥ ಮಂಡಳಿಯ ಜಿಲ್ಲಾ ಮತ್ತು ತಾಲ್ಲೂಕು ಶಾಖೆಗಳಿಂದ ಆಯೋಜಿಸಿದ್ದ ‘ವೇದೋನಿತ್ಯಮಧೀಯತಾಂ’ ವೇದ ಪಾರಾಯಣದ ಅಭಿನಂದನಾ ಸಮಾರಂಭದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ವೇದ ಮಂತ್ರಗಳು ಮನುಷ್ಯನ ಅಂತಃಸತ್ವವನ್ನು ಹೆಚ್ಚಿಸುತ್ತವೆ. ಅವನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುವ ಸಾಮರ್ಥ್ಯ ವೇದ ಮಂತ್ರಗಳಲ್ಲಿ ಇದೆ. ಈ ಮಂತ್ರಗಳನ್ನು ಲೋಕಕಲ್ಯಾಣಾರ್ಥವಾಗಿ ಪಠಿಸಿ ವಿಪ್ರವೃಂದ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ ಎಂದು ಅವರು ತಿಳಿಸಿದರು.
ಸದಾ ಪರಮಾತ್ಮನ ಸನ್ನಿದಾನದಲ್ಲಿರುತ್ತಾ ಆದ್ಯಾತ್ಮ ಜೀವನ ನಡೆಸುವ ವಿಪ್ರರು ಸಮಾಜಕ್ಕೆ ತಮ್ಮನ್ನೇ ಅರ್ಪಣೆ ಮಾಡಿಕೊಂಡಿದ್ದಾರೆ. ಸಮಾಜಕ್ಕೆ ಮಾರ್ಗದರ್ಶನ ಮಾಡುವ ವಿಪ್ರ ಕುಲಕ್ಕೆ ಸರ್ಕಾರದ ವತಿಯಿಂದ ಏನೇ ಅನುಕೂಲ ಬೇಕಿದ್ದರೂ ಮುಂದೆ ನಿಂತು ನಡೆಸಿಕೊಡುತ್ತೇನೆ ಎಂದು ಹೇಳಿದರು.
ವಿಪ್ರ ಪೌರೋಹಿತರ ಮತ್ತು ಆಗಮೀಕರ ವಿಶ್ವಸ್ಥ ಮಂಡಳಿಯ ಜಿಲ್ಲಾ ಅಧ್ಯಕ್ಷ ಎಲ್.ಶಿವಗುರು ಶರ್ಮ ಮಾತನಾಡಿ, ವೇದಗಳ ಸಂರಕ್ಷಣೆಯಾಗಬೇಕು ಹಾಗೂ ವೇದದ ಮಹತ್ವ ಎಲ್ಲರಿಗೂ ತಿಳಿಸಬೇಕೆಂಬ ಉದ್ದೇಶ ದಿಂದ ವೇದಪಾರಾಯಣ ಅಭಿಯಾನವನ್ನು ತಾಲ್ಲೂಕಿನ ೧೦ ದೇವಸ್ಥಾನಗಳಲ್ಲಿ ಮತ್ತು ೧ ಮನೆಗಳಲ್ಲಿ ನಡೆಸಿದ್ದೇವೆ. ವಿಪ್ರಕುಲಕ್ಕೆ ಶಕ್ತಿ, ಆತ್ಮಸ್ಥೈರ್ಯ ತುಂಬಲು ಪ್ರತೀ ವರ್ಷವೂ ಈ ಅಭಿಯಾನವನ್ನು ಮುಂದುವರೆಸುವುದಾಗಿ . ಸಾಂಘಿಕವಾಗಿ ವಿಪ್ರಕುಲಕ್ಕೆ ಶಕ್ತಿ, ಆತ್ಮಸ್ಥೈರ್ಯ ತುಂಬಿ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುನ್ನ ವೇ.ಬ್ರ.ಶ್ರೀ ವಿರೂಪಾಕ್ಷಂ ರಾಮಮೋಹನ್‌ ಶಾಸ್ತ್ರಿ ಮತ್ತು ತಂಡದವರಿಂದ ಲೋಕಕಲ್ಯಾಣಾರ್ಥವಾಗಿ ಶಂಕರಮಠದಲ್ಲಿ ಅಭಿಷೇಕವನ್ನು ನೆರವೇರಿಸಲಾಯಿತು. ವೇದ ಪಾರಾಯಣದಲ್ಲಿ ಪಾಲ್ಗೊಂಡಿದ್ದ ವೇದ ಪಂಡಿತರುಗಳಾದ ರಾಮಮೋಹನಶಾಸ್ತ್ರಿ, ಎಂ.ಎಸ್.ನಾರಾಯಣಮೂರ್ತಿ, ಎಂ.ಎಸ್.ವೆಂಕಟೇಶಮೂರ್ತಿ, ವೆಂಕಟಬಾಲಶಾಸ್ತ್ರಿ, ಬಿ.ಕೃಷ್ಣಮೂರ್ತಿ, ದಾಶರಥಿ ಮುಂತಾದವರನ್ನು ಸನ್ಮಾನಿಸಲಾಯಿತು. ವೇದ ಮತ್ತು ಆಗಮ ಪಂಡಿತ ಎಂ.ಎನ್.ಶ್ರೀಕಾಂತ ಶರ್ಮ ಉಪನ್ಯಾಸ ನೀಡೀದರು.
ವಿಪ್ರ ಪೌರೋಹಿತರ ಮತ್ತು ಆಗಮೀಕರ ವಿಶ್ವಸ್ಥ ಮಂಡಳಿಯ ತಾಲ್ಲೂಕು ಅಧ್ಯಕ್ಷ ವೈ.ಎನ್‌.ದಾಶರಥಿ, ಜಿಲ್ಲಾ ಘಟಕದ ಅಧ್ಯಕ್ಷ ಎಲ್‌.ಶಿವಗುರುಶರ್ಮ, ನಗರಸಭೆ ಸದಸ್ಯ ವಿ.ಮುನಿರಾಜು, ಜಿಲ್ಲಾ ಬ್ರಾಹ್ಮಣ ಮಹಾಸಭಾ ಮಾಜಿ ಅಧ್ಯಕ್ಷ ಎಂ.ವಾಸುದೇವರಾವ್, ತಾಲ್ಲೂಕು ಅಧ್ಯಕ್ಷ ಎ.ಎಸ್‌.ರವಿ, ವಿಪ್ರ ಪ್ರತಿಭಾ ಪುರಸ್ಕಾರ ಹಾಗೂ ಸೇವಾ ಟ್ರಸ್ಟ್‌ ಗೌರವಾಧ್ಯಕ್ಷ ಡಾ.ಡಿ.ಟಿ.ಸತ್ಯನಾರಾಯಣರಾವ್‌, ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ, ಗ್ರೇಡ್ ೨ ತಹಶೀಲ್ದಾರ್ ಹನುಮಂತರಾವ್, ನಗರ್ತಮಂಡಳಿ ಅಧ್ಯಕ್ಷ ಶಿವಶಂಕರ್, ಎನ್.ಶ್ರೀಕಾಂತ್, ಜಿ.ಕೃಷ್ಣಮೂರ್ತಿ ಹಾಜರಿದ್ದರು.

error: Content is protected !!