26.3 C
Sidlaghatta
Tuesday, July 1, 2025

ಶಾಲಾ ವಾರ್ಷಿಕೋತ್ಸವ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ

- Advertisement -
- Advertisement -

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತೆಗೆಯಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ಗ್ರಾಮದ ಹಿರಿಯ ಸೀತಾರಾಮಪ್ಪ ತಿಳಿಸಿದರು.
ತಾಲ್ಲೂಕಿನ ಗಾಂಡ್ಲಚಿಂತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಜೆ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳಲ್ಲಿ ಅಪಾರ ಪ್ರತಿಭೆಯಿದೆ. ಅವರು ಪ್ರದರ್ಶಿಸುವ ಕಲೆಯನ್ನು ನೋಡಿದರೆ ಬೆರಗಾಗುತ್ತದೆ. ಅವರಿಗೆ ಹಿರಿಯರ ಪ್ರೋತ್ಸಾಹ ಅತ್ಯಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯಲ್ಲಿ 13 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕ ವಿ.ಎಂ.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳು ಕೊಂಕಣದ ಜಾಲಿಗರು, ಕೊಡವ, ಮರಾಠಿ ಭಾಷಾ ನೃತ್ಯ, ಕೋಲಾಟ ಮುಂತಾದವುಗಳನ್ನು ಪ್ರದರ್ಶಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಗಂಗಪ್ಪ, ಎಸ್ಡಿಎಂಸಿ ಅಧ್ಯಕ್ಷ ದೇವರಾಜು, ಬೈರಾರೆಡ್ಡಿ, ಮುಖ್ಯ ಶಿಕ್ಷಕ ಎಸ್.ಎಂ.ಆದಿನಾರಾಯಣ, ಸೇವಾದಳ ವೆಂಕಟರೆಡ್ಡಿ, ಶಿಕ್ಷಕರಾದ ಶ್ರೀನಿವಾಸ್, ನಾಗೇಶ್, ರಾಮರೆಡ್ಡಿ, ಶ್ವೇತ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!