ಶಾಲೆ ಅಭಿವೃದ್ಧಿಯ ಕಂಕಣ ತೊಟ್ಟ ‘ಸ್ಫೂರ್ತಿ ಯುವಕರ ಬಳಗ’

- Advertisement -
- Advertisement -

ಗ್ರಾಮದ ಯುವಕರು ಸರ್ಕಾರಿ ಶಾಲೆ ಅಭಿವೃದ್ಧಿಯ ಧ್ಯೇಯದೊಂದಿಗೆ ಸಂಘವನ್ನು ಕಟ್ಟಿಕೊಂಡಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ಮುನಿನರಸಿಂಹಯ್ಯ ತಿಳಿಸಿದರು.
ತಾಲ್ಲೂಕಿನ ತಾತಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಈಚೆಗೆ ಗ್ರಾಮದ ಯುವಕರ ‘ಸ್ಫೂರ್ತಿ ಯುವಕರ ಬಳಗ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಯ ಅಗತ್ಯತೆಗಳನ್ನು ಪೂರೈಸುತ್ತಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣವಾಗುವ ಅವಶ್ಯಕತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾರಂಭವಾಗಿರುವ ಯುವಕರ ಬಳಗ ಯಶಸ್ವಿಯಾಗಿ ಮುಂದುವರೆಯಲಿ. ಮಕ್ಕಳ ಪಠ್ಯೇತರ ಚಟುವಟಿಕೆಗಳನ್ನು ನಡೆಸಿ ಅವರ ಪ್ರತಿಭೆಯನ್ನು ಹೊರಹೊಮ್ಮಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಂತರಶಾಲಾ ಸ್ಪರ್ಧೆಗಳನ್ನು ನಡೆಸುವ ಮೂಲಕ ಶಾಲೆಯ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ನೂತನ ಗೇಟ್ ಮತ್ತು ಆರ್ಚ್ ಉದ್ಘಾಟಿಸಲಾಯಿತು. ಗ್ರಾಮಸ್ಥರು ಶಾಲೆಗೆ ಧ್ವನಿವರ್ಧಕವನ್ನು ನೀಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಸಿ.ಕೃಷ್ಣಪ್ಪ, ಬಾಲಸುಬ್ರಮಣ್ಯಂ, ಶಾಮಣ್ಣ, ಚನ್ನಪ್ಪ, ನಾಗಪ್ಪ, ಹನುಮಂತಪ್ಪ, ರಾಜಣ್ಣ, ನಾರಾಯಣಸ್ವಾಮಿ, ಚಿಕ್ಕನಾರಾಯಣಸ್ವಾಮಿ, ಮುಖ್ಯಶಿಕ್ಷಕಿ ಎಚ್.ಎಂ.ಸರಸ್ವತಮ್ಮ, ಸಹಶಿಕ್ಷಕರಾದ ಎಂ.ದೇವರಾಜ್, ಡಿ.ಎಸ್.ಶ್ರೀಕಾಂತ್, ಎಚ್.ಮಂಜುನಾಥ್, ಎ.ತ್ರಿವೇಣಿ, ನಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!