Home News ಶಾಸಕರಿಂದ ಕೆರೆಗೆ ಬಾಗಿನ ಅರ್ಪಣೆ

ಶಾಸಕರಿಂದ ಕೆರೆಗೆ ಬಾಗಿನ ಅರ್ಪಣೆ

0

ತಾಲ್ಲೂಕಿನಾಧ್ಯಂತ ಈಚೆಗೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಮೊದಲ ಕೆರೆಯೊಂದು ತುಂಬಿರುವುದು ಸಂತಸದ ವಿಷಯವಾಗಿದೆ. ಹೀಗೆಯೇ ಮಳೆಯಾದಲ್ಲಿ, ಬೇಸಿಗೆಯಲ್ಲಿ ನೀರಿನ ಕೊರತೆಯಾಗುವುದಿಲ್ಲ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಗಂಜಿಗುಂಟೆಯ ರೆಡ್ಡಿಕೆರೆ ತುಂಬಿ ಕೋಡಿ ಹೋಗಿದ್ದರಿಂದ ಸೋಮವಾರ ಕೆರೆಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಮ್ಮ ಪೂರ್ವಜರು ಕೆರೆಗಳನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದರು. ಒಂದು ಕೆರೆಯ ನೀರು ಮತ್ತೊಂದಕ್ಕೆ ಹೋಗುವಂತೆ ರೀತಿಯಲ್ಲಿ ಕೆರೆಗಳ ಸಾಲೇ ನಮ್ಮಲ್ಲಿದೆ. ಆದರೆ ಹಲವಾರು ಕರೆಗಳನ್ನು ಒತ್ತುವರಿ ಮಾಡಿರುವ ಕಾರಣ ಹಾಗೂ ರಾಜಕಾಲುವೆಗಳನ್ನು ಮುಚ್ಚಿದ್ದರಿಂದ ನೀರು ಶೇಖರಣೆಯ ಸಾಮರ್ಥ್ಯ ಕಡಿಮೆಯಾಗಿದೆ. ಹಾಗಾಗಿ ಜನರಲ್ಲಿ ಕೆರೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದರು.
ವರುಣನ ಕೃಪೆಯಿಂದ ತಾಲ್ಲೂಕಿನಾದ್ಯಂತ ಮಳೆ ಹೀಗೇ ಮುಂದುವರೆದು ಎಲ್ಲಾ ಕೆರೆಗಳು ತುಂಬಲಿ. ಇದರಿಂದ ಅಂತರ್ಜಲವೂ ಹೆಚ್ಚಾಗಲಿದೆ ಎಂದು ಹೇಳಿದರು.
ಗಂಜಿಗುಂಟೆ ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ, ಮುಖಂಡರಾದ ನರಸಿಂಹರೆಡ್ಡಿ, ನಾರಾಯಣಸ್ವಾಮಿ, ಉಸ್ಮಾನ್ಸಾಬಿ, ರಾಂಬಾಬು ಈ ಸಂದರ್ಭದಲ್ಲಿ ಹಾಜರಿದ್ದರು.
 

error: Content is protected !!