Home News ಶಾಸಕ ವಿ ಮುನಿಯಪ್ಪ ಅವರಿಗೆ ಜಿಲ್ಲಾ ಕಸಾಪದಿಂದ ಅಭಿನಂದನೆ

ಶಾಸಕ ವಿ ಮುನಿಯಪ್ಪ ಅವರಿಗೆ ಜಿಲ್ಲಾ ಕಸಾಪದಿಂದ ಅಭಿನಂದನೆ

0

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಚುಣಾವಣೆಯಲ್ಲಿ ಗೆದ್ದ ಶಾಸಕ ವಿ ಮುನಿಯಪ್ಪ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೈವಾರ ಎನ್.ಶ್ರೀನಿವಾಸ್ ಮುಂದಿನ ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕಸಾಪ ಕಾರ್ಯಕ್ರಮಗಳಲ್ಲಿ ತಾವು ಭಾಗವಹಿಸಿ ಕನ್ನಡದ ಕಾರ್ಯಕ್ರಮಗಳಿಗೆ ಸಹಕಾರ ನೀಡುವಂತೆ ಕೋರಿದರು.
ರಾಜ್ಯ ಕಸಾಪ ಸಾಂಸ್ಕೃತಿಕ ಮತ್ತು ಮಾಧ್ಯಮ ಸಲಹಾ ಸಮಿತಿಯ ಸದಸ್ಯ ಗುಡಿಬಂಡೆ ಎನ್. ನಾರಾಯಣಸ್ವಾಮಿ, ಜಿಲ್ಲಾ ಕೋಶಾಧ್ಯಕ್ಷ ಎಂ. ನಂಜುಂಡಪ್ಪ, ಶಿಡ್ಲಘಟ್ಟ ತಾಲ್ಲೂಕು ಕಸಾಪ ಉಪಾಧ್ಯಕ್ಷ ಶಂಕರ್, ಗೌರಿಬಿದನೂರು ಕಸಾಪ ಪದಾಧಿಕಾರಿಗಳಾದ ಲಕ್ಷ್ಮೀ, ಮಂಜುಳ ಹಾಜರಿದ್ದರು