32.5 C
Sidlaghatta
Thursday, March 28, 2024

ಶಿಡ್ಲಘಟ್ಟದಲ್ಲಿ ಐದನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ದತೆ

- Advertisement -
- Advertisement -

ಗಡಿನಾಡು ಶಿಡ್ಲಘಟ್ಟದಲ್ಲಿ ಐದನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ದತೆಗಳು ನಡೆದಿವೆ.
ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಪ್ರತ್ಯೇಕವಾಗಿ ಅಸ್ಥಿತ್ವಕ್ಕೆ ಬಂದ ನೂತನ ಚಿಕ್ಕಬಳ್ಳಾಪುರ ಜಿಲ್ಲೆಯ ಮೊಟ್ಟ ಮೊದಲ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಈವರೆಗೂ ನಾಲ್ಕು ತಾಲೂಕು ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಜನತೆ ಮತ್ತೊಮ್ಮೆ ಕನ್ನಡಮ್ಮನ ತೇರು ಎಳೆಯಲು ತುದಿಗಾಲಲ್ಲಿ ನಿಂತಿದ್ದು ಅದಕ್ಕಾಗಿ ಸಡಗರ ಸಂಭ್ರಮದಿಂದ ಸಿದ್ದತೆಗಳನ್ನು ನಡೆಸಲಾಗುತ್ತಿದೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತನ್ನದೇ ಆದ ಸೇವೆಯನ್ನು, ಕೊಡುಗೆಯನ್ನು ನೀಡಿದ ಎನ್.ಶಿವಣ್ಣರವರ ಸಮ್ಮೇಳನಾಧ್ಯಕ್ಷತೆಯಲ್ಲಿ ಇದೆ ತಿಂಗಳ 29 ರಂದು ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ನಡೆಯಲಿದ್ದು ಈ ಬಗ್ಗೆ ಈಗಾಗಲೇ ಕೈಗೊಂಡ ಸಿದ್ದತೆಗಳ ಬಗ್ಗೆ ಸಾಹಿತ್ಯ ಪರಿಷತ್‍ನ ತಾಲೂಕು ಅಧ್ಯಕ್ಷ ಕೃ.ನಾ.ಶ್ರೀನಿವಾಸ್ ಹಾಗೂ ಅವರ ಬಳಗದವರು ಸುದ್ದಿಗೋಷ್ಠಿ ನಡೆಸಿ ನೀಡಿದ ವಿವರ ಹೀಗಿದೆ.
ಜುಲೈ 29 ರ ಬೆಳಗ್ಗೆ 8.30ಕ್ಕೆ ವಾಸವಿ ಕಲ್ಯಾಣ ಮಂಟಪದ ಆವರಣದಲ್ಲಿ ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ ರವರು ರಾಷ್ಟ್ರಧ್ವಜ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ರವರು ನಾಡಧ್ವಜವನ್ನು ಹಾಗೂ ಸಾಹಿತ್ಯ ಪರಿಷತ್‍ನ ತಾಲೂಕು ಅಧ್ಯಕ್ಷರಾದ ಕೃ.ನಾ.ಶ್ರೀನಿವಾಸ್ ರವರು ಪರಿಷತ್‍ನ ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಸಮ್ಮೇಳಕ್ಕೆ ಚಾಲನೆ ನೀಡಲಾಗುವುದು ಎಂದರು.
ನಂತರ 9.30ಕ್ಕೆ ನಗರದ ಮಿನಿ ವಿಧಾನಸೌಧದಿಂದ ಸಮ್ಮೇಳನಾಧ್ಯಕ್ಷರ ಹಾಗೂ ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆ ಆರಂಭವಾಗಲಿದ್ದು ಆರಕ್ಷಕ ವೃತ್ತ ನಿರೀಕ್ಷಕ ಬಿ.ಎಲ್.ಶ್ರೀನಿವಾಸಮೂರ್ತಿ ಮೆರವಣಿಗೆಗೆ ಚಾಲನೆ ನೀಡಲಿದ್ದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವೆಂಕಟಾಚಲಪತಿರವರು ಉಪಸ್ಥಿತಿಯಿರುತ್ತಾರೆ. ಮೆರವಣಿಗೆಯು ಪ್ರವಾಸಿ ಮಂದಿರ ರಸ್ತೆಯಲ್ಲಿ ಸಾಗಿ ಕೋಟೆ ವೃತ್ತದ ಮೂಲಕ ಸಮ್ಮೇಳನ ನಡೆಯುವ ವಾಸವಿ ಕಲ್ಯಾಣ ಮಂಟಪಕ್ಕೆ ಆಗಮಿಸಲಿದೆ.
ಡೊಳ್ಳು ಕುಣಿತ ಸೇರಿದಂತೆ ನಾನಾ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆಯಲ್ಲದೆ ನಾಡ ಧ್ವಜದ ಭಾರೀ ಗಾತ್ರದ ಬಾವುಟಗಳು ಈ ಬಾರಿಯ ಮೆರವಣಿಗೆಗೆ ಹೆಚ್ಚು ಮೆರಗು ನೀಡಲಿವೆ ಎಂದು ವಿವರಿಸಿದರು.
ಮೆರವಣಿಗೆಯ ನಂತರ ವಾಸವಿ ಕಲ್ಯಾಣ ಮಂಟಪದಲ್ಲಿ ಶಾಸಕ ಎಂ.ರಾಜಣ್ಣರವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಭುವನೇಶ್ವರಿ ಭಾವಚಿತ್ರ ಅನಾವರಣವನ್ನು ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಂಜಿನಮ್ಮ ಹಾಗು ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ನಗರಸಭೆ ಅಧ್ಯಕ್ಷರಾದ ಮುಷ್ಠರಿತನ್ವೀರ್‍ರವರು ನೆರವೇರಿಸುವರು.
ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಎಸ್.ವಿ.ನಾಗರಾಜರಾವ್ ಪ್ರಾಸ್ತಾವಿಕ ನುಡಿ ನುಡಿಯಲಿದ್ದು ಡಾ.ಡಿ.ಟಿ.ಸತ್ಯನಾರಾಯಣರಾವ್ ನಿಕಟಪೂರ್ವ ಅಧ್ಯಕ್ಷರ ನುಡಿಗಳನ್ನು ನುಡಿಯಲಿದ್ದಾರೆ. ಸಮ್ಮೇಳಾನಾಧ್ಯಕ್ಷರಾದ ಎನ್.ಶಿವಣ್ಣ ಸಮ್ಮೇಳನಾಧ್ಯಕ್ಷರ ಭಾಷಣ ಮಾಡಿದರೆ ಕನ್ನಡ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷರಾದ ವೈ.ಎಲ್.ಹನುಮಂತರಾವ್ ನೆರವೇರಿಸಿಕೊಡಲಿದ್ದಾರೆ ಎಂದು ವಿವರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಲೀಲಾರಾಜಣ್ಣ, ಎಸ್.ಎಂ.ನಾರಾಯಣಸ್ವಾಮಿ, ಶೋಭಜೈಪ್ರಕಾಶ್, ಕೆ.ಎಂ.ಸತೀಶ್, ಕೋಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಸಿ.ಎಂ.ಗೋಪಾಲ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಅಮೃತ್‍ಕುಮಾರ್, ಮಂಚನಬೆಲೆ ಶ್ರೀನಿವಾಸ್, ಖಜಾಂಚಿ ವಾಸುದೇವಮೂರ್ತಿ ಹಾಗು ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಅಂದು ಮದಾಹ್ನ 2 ಘಂಟೆಗೆ ಮೊದಲ ಗೋಷ್ಠಿ ಆರಂಭವಾಗಲಿದ್ದು ಕನ್ನಡ ಭಾಷೆ ಮತ್ತು ಸವಾಲುಗಳು ವಿಷಯದ ಬಗ್ಗೆ ನಿವೃತ್ತ ಪ್ರಾಂಶುಪಾಲರಾದ ಮಹಮ್ಮದ್‍ಖಾಸಿಂ ರವರು ವಿಷಯ ಮಂಡನೆ ಮಾಡಲಿದ್ದಾರೆ. ಹಾಗೆಯೆ ಮಹಿಳಾ ಜಾಗೃತಿ ಮತ್ತು ಶಿಕ್ಷಣ ವಿಚಾರವಾಗಿ ಉಪನ್ಯಾಸಕಿ ಡಾ.ಜಿ.ಸುಧಾ ವಿಷಯ ಮಂಡಿಸಲಿದ್ದು ಪ್ರಸ್ತುತ ಶಾಶ್ವತ ನೀರಾವರಿ ಹೋರಾಟ ವಿಚಾರವಾಗಿ ರೈತಸಂಘ ಹಾಗು ಹಸಿರುಸೇನೆಯ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ವಿಷಯ ಮಂಡನೆ ಮಾಡಲಿದ್ದಾರೆ. ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.
ಗೋಷ್ಠಿಯ ನಂತರ ಕವಿಗೋಷ್ಠಿ ಆರಂಭವಾಗಲಿದ್ದು ಸರಕಾರಿ ಪ್ರಥಮ ದರ್ಜೆ ಮಹಿಲಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಆರ್.ನರಸಿಂಹಮೂರ್ತಿ ಅಧ್ಯಕ್ಷತೆವಹಿಸಲಿದ್ದು ಕು.ಅನಂತಲಕ್ಷ್ಮಿ, ಆರ್.ಸುಂದರಾಚಾರಿ, ನಾರಾಯಣಕುಲಕರ್ಣಿ, ಪಿ.ಎನ್.ಮುನೀರ್, ಡಿ.ಕೆ.ಕವಿತಾ ಭಾಸ್ಕರ್, ಎಸ್.ಕಾಶೀನಾಥ್, ರಾಜೇಶ್ವರಿ, ಸಿ.ಮೀನಾ, ಬಿ.ಕೆ.ರವಿ, ಕೆ.ಎನ್.ವೆಂಕಟಾಚಾರಿ, ತಮ್ಮ ಕವನ ವಾಚನ ಮಾಡಲಿದ್ದಾರೆ.
ಸಂಜೆ 4-15 ಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ರಾಜ್ಯ ವಕೀಲರ ಸಂಘದ ಒಕ್ಕೂಟದ ಅಧ್ಯಕ್ಷರಾದ ಕೆ.ಎನ್.ಸುಬ್ಬಾರೆಡ್ಡಿ ವಹಿಸಿದರೆ ಅತಿಥಿಗಳಾಗಿ ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾ.ಪಂ ಇಓ ಕೆ.ರಾಮಾನುಜಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ, ನಗರಸಭೆ ಪ್ರಭಾರಿ ಆಯುಕ್ತರಾದ ಎಸ್.ಎ.ರಾಮ್‍ಪ್ರಕಾಶ್, ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಸಂಜೆ 5 ಘಂಟೆಗೆ ಸಮಾರೋಪ ಸಮಾರಂಭದಲ್ಲಿ ಮಾಜಿ ಸಾಸಕ ವಿ.ಮುನಿಯಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಡಿ.ಎಸ್.ಎನ್.ರಾಜು, ನಗರಸಭೆ ಉಪಾಧ್ಯಕ್ಷೆ ಸುಮಿತ್ರ ಎಸ್.ಎಂ.ರಮೇಶ್, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್.ಕೆ.ಗುರುರಾಜರಾವ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ನಾಗರಾಜ್ ಮತ್ತಿತರರು ಭಾಗವಹಿಸಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮ್ಮೇಳನಾಧ್ಯಕ್ಷರಾದ ಎನ್.ಶಿವಣ್ಣ ವಹಿಸಲಿದ್ದಾರೆ.
ಅಂದು ಸಂಜೆ 6.30 ಕ್ಕೆ ಸಾಂಸ್ಕøತಿಕ ಕಾರ್ಯಕಮ್ರಗಳು ನಡೆಯಲಿದ್ದು ಕಡುಬುಗೆರೆ ಮುನಿರಾಜು ಮತ್ತು ತಂಡದವರಿಂದ ಸುಗಮಸಂಗೀತ ಏರ್ಪಡಿಸಲಾಗಿದೆ.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!