31.1 C
Sidlaghatta
Saturday, February 28, 2026

ಶಿಡ್ಲಘಟ್ಟ ತಾಲ್ಲೂಕಿನೆಲ್ಲೆಡೆ ಶ್ರದ್ಧಾಭಕ್ತಿಯಿಂದ ಹನುಮ ಜಯಂತಿ ಆಚರಣೆ

- Advertisement -
- Advertisement -

ತಾಲ್ಲೂಕಿನೆಲ್ಲೆಡೆ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿಯ ಪ್ರಯುಕ್ತ ಗುರುವಾರ ವಿಶೇಷ ಪೂಜೆಯನ್ನು ನಡೆಸಲಾಯಿತು.
ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮಜಯಂತಿಯನ್ನು ಶ್ರದ್ಧಾಭಕ್ತಿಯಿಂದ ವಿಶೇಷವಾಗಿ ಆಚರಿಸಲಾಯಿತು. ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯ ಕಲ್ಯಾಣೋತ್ಸವ ಹಾಗೂ ೩೦ ನೇ ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಕ್ತಿಗೀತೆ, ಭಾವಗೀತೆ, ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಬುಧವಾರ ರಾತ್ರಿ ಗ್ರಾಮದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಮಾಡಲಾಯಿತು. ಹೂವಿನ ಪಲ್ಲಕ್ಕಿಯ ಉತ್ಸವಕ್ಕೆ ನೂರಾರು ಮಂದಿ ಸಾಕ್ಷಿಯಾದರು. ದೇವಾಲಯವನ್ನು ಹಾಗೂ ಗ್ರಾಮದ ಪ್ರಮುಖ ರಸ್ತೆಗಳನ್ನೆಲ್ಲಾ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಸಾವಿರಾರು ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ತಿಂಡಿ ತಿನಿಸುಗಳು, ಆಟಿಕೆಗಳು, ಮುಂತಾದ ವಿವಿಧ ರೀತಿಯ ಅಂಗಡಿಗಳು ತರೆಯಲಾಗಿತ್ತು. ಆಗಮಿಸಿದ ಭಕ್ತರಿಗೆಲ್ಲಾ ದೇವಾಲಯದ ಸಮಿತಿ ವತಿಯಿಂದ ಭೋಜನ ವ್ಯವಸ್ಥೆಯನ್ನು ಮಾಡಿದ್ದರು.
ತಾಲ್ಲೂಕಿನ ನಾಗಮಂಗಲ ಗ್ರಾಮದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯದಲ್ಲಿ ೧೩ನೇ ವರ್ಷದ ಹನುಮಜಯಂತಿಯನ್ನು ಆಚರಿಸಲಾಯಿತು. ಚೋಳರ ಕಾಲದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯ ತಾಲ್ಲೂಕಿನ ಪುರಾತನ ದೇವಾಲಯಗಳಲ್ಲಿ ಒಂದಾಗಿದೆ. ಶಿಥಿಲಗೊಂಡಿದ್ದ ದೇವಾಲಯವನ್ನು ಗ್ರಾಮಸ್ಥರು ನವೀಕರಿಸಿದ ನಂತರ ಪ್ರತಿ ವರ್ಷವೂ ಹನುಮಜಯಂತಿಯನ್ನು ವಿಶೇಷವಾಗಿ ಒಗ್ಗಟ್ಟಿನಿಂದ ಆಚರಿಸಿಕೊಂಡು ಬರಲಾಗುತ್ತಿದೆ.
ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಲಾಗಿತ್ತು.
ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ಆಗಮಿಸಿದ ಭಕ್ತರಿಗೆಲ್ಲಾ ದೇವಾಲಯದ ಸಮಿತಿ ವತಿಯಿಂದ ಭೋಜನ ವ್ಯವಸ್ಥೆಯನ್ನು ಮಾಡಿದ್ದರು.
ತಾಲ್ಲೂಕಿನ ವಿವಿದೆಡೆ ಹನುಮಜಯಂತಿ: ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಾಲಯ, ಅಪ್ಪೇಗೌಡನಹಳ್ಳಿ ಗೇಟ್ ನ ಬಯಲಾಂಜನೇಯಸ್ವಾಮಿ ದೇವಾಲಯ, ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯ, ಮಯೂರ ವೃತ್ತದ ಆಂಜನೇಯಸ್ವಾಮಿ, ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯಸ್ವಾಮಿ ದೇಗುಲ, ಮುತ್ತೂರು ಗ್ರಾಮ, ಎಚ್.ಕ್ರಾಸ್, ಚೊಕ್ಕಂಡಹಳ್ಳಿ, ಎದ್ದಲತಿಪ್ಪೇನಹಳ್ಳಿ ಮುಂತಾದೆಡೆ ಶ್ರದ್ಧಾ ಭಕ್ತಿಯಿಂದ ಹನುಮಜಯಂತಿಯನ್ನು ಆಚರಿಸಲಾಯಿತು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!