Home News ಶುಲ್ಕ ಪಾವತಿ ಮಾಡದ ವಿದ್ಯಾರ್ಥಿ ಶಾಲೆಯಿಂದ ಹೊರಗೆ: ಪೋಷಕರಿಂದ ಶಿಕ್ಷಕನ ಮೇಲೆ ಹಲ್ಲೆ

ಶುಲ್ಕ ಪಾವತಿ ಮಾಡದ ವಿದ್ಯಾರ್ಥಿ ಶಾಲೆಯಿಂದ ಹೊರಗೆ: ಪೋಷಕರಿಂದ ಶಿಕ್ಷಕನ ಮೇಲೆ ಹಲ್ಲೆ

0

ಶುಲ್ಕ ಕಟ್ಟಿಲ್ಲ ಎಂದು ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಗೆ ನಿಲ್ಲಿಸಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿಯ ಪೋಷಕರು ಶಾಲಾ ಶಿಕ್ಷಕನನ್ನು ಮಂಗಳವಾರ ಥಳಿಸಿದ್ದಾರೆ.
ನಗರದ ಕ್ರೆಸೆಂಟ್ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಶುಲ್ಕ ಕಟ್ಟಿಲ್ಲ ಎನ್ನುವ ಕಾರಣಕ್ಕೆ ಶಾಲೆಯಿಂದ ಹೊರಗೆ ನಿಲ್ಲಿಸಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿಯ ಪೋಷಕ ಚಾಂದ್ ಪಾಷ ಶಾಲೆಗೆ ತೆರಳಿ ಮಗುವನ್ನು ಹೊರಗೆ ನಿಲ್ಲಿಸಿದ ವಿಚಾರವಾಗಿ ತಗಾದೆ ತೆಗೆದು ಶಿಕ್ಷಕನ ಮೇಲೆ ಹಲ್ಲೆ ನಡೆಸಿರುವುದಾಗಿ ಕ್ರೆಸೆಂಟ್ ಶಾಲೆಯ ಮುಖ್ಯಸ್ಥ ತಮೀಮ್ ಅನ್ಸಾರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರತಿಯಾಗಿ ದೂರು ನೀಡಿರುವ ಚಾಂದ್ ಪಾಷ ತನ್ನ ಮಗುವನ್ನು ಶುಲ್ಕ, ಡೊನೇಷನ್ ಕಟ್ಟಿಲ್ಲ, ತಡ ಆಗಿದೆ ಎನ್ನುವ ಕಾರಣಕ್ಕೆ ಶಾಲೆಯಿಂದ ಹೊರಗೆ ನಿಲ್ಲಿಸಿ ಅಪಮಾನ ಮಾಡಿದ್ದಾನೆ ಎಂದು ದೂರಿದ್ದಾರೆ.
ಚಾಂದ್ ಪಾಷ ಹಾಗೂ ಇತರೆ ಪೋಷಕರು, ಬಿಇಒ ಎಸ್.ರಘುನಾಥರೆಡ್ಡಿಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

error: Content is protected !!