ಶೈಕ್ಷಣಿಕ ಬಂದ್‌ಗೆ ವಿದ್ಯಾರ್ಥಿಗಳ ಬೆಂಬಲ

- Advertisement -
- Advertisement -

ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಎಸ್‌.ಎಫ್‌.ಐ ಸಂಘಟನೆಯು ಸೆಪ್ಟೆಂಬರ್‌ 10 ರಂದು ರಾಜ್ಯಾದ್ಯಂತ ಶೈಕ್ಷಣಿಕ ಬಂದ್‌ಗೆ ಕರೆ ನೀಡಿದ್ದು, ಈ ಬಗ್ಗೆ ಸೋಮವಾರ ಎಸ್‌.ಎಫ್‌.ಐ ವತಿಯಿಂದ ಪಟ್ಟಣದ ಶಾಲಾ ಕಾಲೇಜುಗಳಲ್ಲಿ ಪ್ರಚಾರ ನಡೆಸಿ ಸಹಕಾರ ನೀಡುವಂತೆ ಭಿತ್ತಿಪತ್ರಗಳನ್ನು ಹಂಚಲಾಯಿತು.
ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ಕೈಗೊಳ್ಳುತ್ತಿದ್ದೇವೆ. ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ, ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಶಾಲಾ ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚಿಸಬೇಕು. ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಶಿಕ್ಷಣಕ್ಕಾಗಿ ರಾಜ್ಯ ಬಜೆಟ್‌ನಲ್ಲಿ ಶೇಕಡಾ 30 ಹಾಗೂ ಕೇಂದ್ರ ಬಜೆಟ್‌ನಲ್ಲಿ ಶೇಕಡಾ 6 ರಷ್ಟು ಹಣವನ್ನು ಮೀಸಲಿಡಬೇಕು. ಪದವಿ ಪಠ್ಯ ಪುಸ್ತಕ ವಿಳಂಬವಾಗಬಾರದು. ಪರಿಶಿಷ್ಠ ಜಾತಿ ಹಾಗೂ ಪಂಗಡ ಮತ್ತು ಒ.ಬಿ.ಸಿ ಹಾಸ್ಟೆಲ್‌ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆಯನ್ನು ಹೆಚ್ಚಿಸಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿ ಉನ್ನತೀಕರಿಸಬೇಕು. ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಅನುಮತಿಯನ್ನು ರದ್ದುಪಡಿಸಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅಕ್ರಮ ಡೊನೇಷನ್‌ ವಸೂಲಿ ನಿಲ್ಲಬೇಕು. ಆರ್‌.ಟಿ.ಇ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಮುಂತಾದ ಬೇಡಿಕೆಗಳನ್ನು ಇಡುತ್ತಿದ್ದೇವೆ. ಎಲ್ಲಾ ವಿದ್ಯಾರ್ಥಿಗಳೂ ಶೈಕ್ಷಣಿಕ ಸುವ್ಯವಸ್ಥೆಗಾಗಿ ಬಂದ್‌ಗೆ ಸಹಕರಿಸಬೇಕೆಂದು ಕೋರಿದರು.
ಡಿ.ವೈ.ಎಫ್‌.ಐ ರಾಜ್ಯ ಸಮಿತಿ ಸದಸ್ಯ ಕುಂದಲಗುರ್ಕಿ ಮುನೀಂದ್ರ, ಎಸ್‌.ಎಫ್‌.ಐ ಸಂಘಟನೆಯ ಅಂಬರೀಷ್‌, ನಾಗೇಶ್‌, ಹರೀಶ್‌, ಮಂಜುನಾಥ್, ಮುಜಾಹಿದ್‌ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!