ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಬುಧವಾರ ಶ್ರಮಶಕ್ತಿ ಯೋಜನೆಯಡಿ ಸುಮಾರು 26 ಮಂದಿ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ತಲಾ 25 ಸಾವಿರ ರೂ ಸಾಲದ ಮಂಜೂರಾತಿ ಪತ್ರ ವಿತರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಅಲ್ಪಸಂಖ್ಯಾತರಿಗಾಗಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಎಲ್ಲರೂ ಆರ್ಥಿಕವಾಗಿ ಮುಂದುವರೆಯಬೇಕು ಎಂದು ಅವರು ಹೇಳಿದರು.
ಪಡೆದ ಸಾಲವನ್ನು ನಿರ್ದಿಷ್ಠ ಉದ್ದೇಶಕ್ಕಾಗಿ ಬಳಸಿಕೊಂಡು ಪ್ರತಿಯೊಬ್ಬರೂ ಆರ್ಥಿಕವಾಗಿ ಮುಂದುವರೆಯಬೇಕು. ಮುಂದಿನ ದಿನಗಳಲ್ಲಿ ಶ್ರಮಶಕ್ತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಸಾಲ ವಿತರಿಸಲು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಕೃಷ್ಣಮೂರ್ತಿ, ಜಭೀವುಲ್ಲಾ, ಮುಖಂಡರಾದ ಅಂಜದ್, ಅಕ್ರಂ, ಮುಸ್ತು ಹಾಜರಿದ್ದರು.