25.1 C
Sidlaghatta
Friday, April 26, 2024

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾ ಕಚೇರಿ ಉದ್ಘಾಟನೆ

- Advertisement -
- Advertisement -

ಸಹಕಾರ ತತ್ವದಿಂದ ಸಾಮಾಜಿಕ ಅಭಿವೃದ್ಧಿ ಸಾಧ್ಯವೆಂದು ಮನಗಂಡು ಗ್ರಾಮಾಭಿವೃದ್ಧಿ ಯೋಜನೆಯು ರೂಪುಗೊಂಡಿದೆ ಎಂದು ಡಾ.ಡಿ.ಟಿ.ಸತ್ಯನಾರಾಯಣರಾವ್‌ ತಿಳಿಸಿದರು.
ಪಟ್ಟಣದ ಚಿಂತಾಮಣಿ ರಸ್ತೆಯ ಕೆಂಪೇಗೌಡ ಕಟ್ಟಡದಲ್ಲಿ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭ್ರಷ್ಟಾಚಾರ, ಮಹಿಳಾ ದೌರ್ಜನ್ಯ, ಬಡತನ ಮುಂತಾದ ಸಾಮಾಜದ ನಕಾರಾತ್ಮಕ ಅಂಶಗಳಿಂದ ಮುಕ್ತರಾದಾಗ ಮಾತ್ರ ಪ್ರಗತಿಯು ಸಾಧ್ಯ. ಶಾಂತಿ ಮತ್ತು ನೆಮ್ಮದಿಯ ಜೀವನವನ್ನು ನಡೆಸಿ ಉತ್ತಮ ಆರೋಗ್ಯ, ಶಿಕ್ಷಣ ಪಡೆಯಲು ಸಾಂಘಿಕ ಪ್ರಯತ್ನದ ಅಗತ್ಯವಿದೆ ಎಂದು ತಿಳಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಡ್ಲಘಟ್ಟ ತಾಲ್ಲೂಕು ಯೋಜನಾಧಿಕಾರಿ ಬಿ.ಆರ್‌. ಯೋಗೀಶ್‌ ಕನ್ಯಾಡಿ ಮಾತನಾಡಿ ‘ಈ ಸ್ವಯಂ ಸೇವಾ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಡಕೃಷಿಕರ, ಕೃಷಿಕೂಲಿ ಕಾರ್ಮಿಕರ ಅಭಿವೃದ್ಧಿಗೆ 8 ವರ್ಷಗಳ ಕಾಲ ಸತತವಾಗಿ ಅನುದಾನ, ಸಹಕಾರ ಹಾಗೂ ಮಾರ್ಗದರ್ಶನದ ಮೂಲಕ ಪ್ರಯತ್ನಿಸಲಾಗಿತ್ತು. ಆನಂತರ ವಿಸ್ತಾರಗೊಳ್ಳುತ್ತಾ ರಾಜ್ಯದ 22 ಜಿಲ್ಲೆ, ಕೇರಳ ರಾಜ್ಯದ ಒಂದು ಜಿಲ್ಲೆಯಲ್ಲಿ ವಿಸ್ತರಿಸಲ್ಪಟ್ಟಿದೆ. ಪ್ರಸ್ತುತ ವರ್ಷ ರಾಜ್ಯದ 3 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ವಿಸ್ತಾರಗೊಳ್ಳುತ್ತಿದೆ. ಜಿಲ್ಲೆಯಲ್ಲೇ ಪ್ರಥಮಬಾರಿಗೆ ಶಿಡ್ಲಘಟ್ಟದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭವಾಗುತ್ತಿದೆ’ ಎಂದು ಹೇಳಿದರು.
‘ಮುಂದಿನ ದಿನಗಳಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 2000 ದಿಂದ 2500 ಪ್ರಗತಿಬಂಧು, ಸ್ವಸಹಾಯ ಸಂಘಗಳ ರಚನೆಯ ಗುರಿಯಿರಿಸಿಕೊಂಡಿದ್ದು ಸದಸ್ಯರಿಗೆ ಆರ್ಥಿಕ, ಸಾಮಾಜಿಕ, ಬೌದ್ಧಿಕ ಅಭಿವೃದ್ಧಿಯ ದಿಸೆಯಲ್ಲಿ ತರಬೇತಿ ಪ್ರವಾಸಗಳನ್ನು ಕೈಗೊಳ್ಳುವುದು, ಪುರುಷರಿಗಾಗಿ ಶ್ರಮವಿನಿಮಯವನ್ನು ಒಳಗೊಂಡ ಪ್ರಗತಿಬಂಧು ಎಂಬ ವಿಶೇಷ ಸ್ವಸಹಾಯಸಂಘಗಳನ್ನು ರಚಿಸಲಾಗುತ್ತದೆ. ಮಹಿಳೆಯರಿಗೆ ಸ್ವಸಹಾಯ ಸಂಘದ ಜೊತೆಯಲ್ಲಿ ಕೌಟುಂಬಿಕ ಸಾಮರಸ್ಯ, ಶಿಕ್ಷಣ, ಸಂಸ್ಕೃತಿ ಸಂಸ್ಕಾರ, ಶುಚಿತ್ವ, ಆರೋಗ್ಯ, ಕಾನೂನು, ಪೌಷ್ಠಿಕ ಆಹಾರ ತಯಾರಿ, ಹಬ್ಬ ಹರಿದಿನಗಳ ಮಹತ್ವದ ಬಗ್ಗೆ ತಿಳಿಸುವ ಉದ್ದೇಶದಿಂದ ಜ್ಞಾನವಿಕಾಸ ಎಂಬ ಮಹಿಳಾ ಕಾರ್ಯಕ್ರಮವನ್ನು ಆರಂಭಿಸಲಾಗುವುದು.
ಆರೋಗ್ಯ ಹಾಗೂ ಶುಚಿತ್ವದ ದೃಷ್ಠಿಯಿಂದ ಶೌಚಾಲಯದ ರಚನೆಗೆ, ಅಡುಗೆ ಅನಿಲದ ಸಮಸ್ಯೆ ನೀಗಿಸಲು ಗೋಬರ್‌ ಗ್ಯಾಸ್‌, ವಿದ್ಯುತ್‌ ಅಭಾವದ ಸಮಸ್ಯೆಗೆ ಸೋಲಾರ್‌ ಅಳವಡಿಕೆಗೆ ಕ್ಷೇತ್ರದಿಂದ ಅನುದಾನ ನೀಡಿ ಪ್ರೋತ್ಸಾಹಿಸಲಾಗುವುದು. ಕೃಷಿ ಉಪಕರಣ, ಹೊಸ ಕೃಷಿ ಮಾಡುವವರಿಗೆ ಪ್ರೋತ್ಸಾಹಧನ ನೀಡಲಾಗುವುದು. ಸ್ವಸಹಾಯ ಸಂಘದ ಸದಸ್ಯರ ಮಕ್ಕಳಿಗೆ ಉದ್ಯೋಗ ಪೂರಕ ಶಿಕ್ಷಣಕ್ಕಾಗಿ ಶಿಷ್ಯವೇತನ, ಬಡವರಿಗೆ ಮಾಸಾಶನ ಒದಗಿಸಲಾಗುವುದು. ಮದ್ಯವರ್ಜನ ಶಿಬಿರವನ್ನು ಆಯೋಜಿಸಿ ಪಾನಮುಕ್ತರನ್ನಾಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಉದ್ಯೋಗ ಸೃಷ್ಠಿ, ಕುಡಿಯುವ ನೀರಿನ ಶುದ್ಧಗಂಗಾ ಯೋಜನೆ ಮಾಡಲಾಗುವುದು’ ಎಂದು ಹೇಳಿದರು.
ಉಪತಹಶಿಲ್ದಾರ್‌ ಕೃಷ್ಣಪ್ಪ ನಾಯಕ್‌, ಶಿವಕುಮಾರಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜರಾವ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಧಾಕೃಷ್ಣ, ಕಂದಾಯ ನಿರೀಕ್ಷಕ ಸುಬ್ರಮಣಿ, ಅನಂತಕೃಷ್ಣ, ಸುರೇಂದ್ರಗೌಡ, ಲೋಕೇಶ್‌ಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!