ಶ್ರೀ ಕೃಷ್ಣಜಯಂತಿ ಆಚರಣೆಯ ಸಲುವಾಗಿ ಪೂರ್ವಭಾವಿ ಸಭೆ

- Advertisement -
- Advertisement -

ಶ್ರೀ ಕೃಷ್ಣಜಯಂತಿಯನ್ನು ಎಂದಿನಂತೆ ಈ ವರ್ಷವೂ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲು ಎಲ್ಲರೂ ಸಹಕರಿಸುವಂತೆ ಗ್ರೇಡ್ ೨ ತಹಸೀಲ್ದಾರ್ ವಾಸುದೇವಮೂರ್ತಿ ಮನವಿ ಮಾಡಿದರು.
ಆಗಸ್ಟ್ ೨೫ ರಂದು ನಗರದ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಿಸುವ ಸಲುವಾಗಿ ಶುಕ್ರವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಮೂರು ವರ್ಷಗಳಿಂದ ಸರ್ಕಾರಿ ಹಬ್ಬವನ್ನಾಗಿ ಆಚರಿಸುತ್ತಿರುವ ಶ್ರೀ ಕೃಷ್ಣ ಜಯಂತಿಯನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಸಹಕರಿಸುವಂತೆ ಮನವಿ ಮಾಡಿದರು.
ತಾಲ್ಲೂಕು ಮಟ್ಟದ ಅಧಿಕಾರಿಗಳು ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡುತ್ತಿದ್ದು ಕಾರ್ಯಕ್ರಮ ಇನ್ನಷ್ಟು ಯಶಸ್ವಿಯಾಗಬೇಕಾದರೆ ತಾಲ್ಲೂಕಿನಾಧ್ಯಂತ ಇರುವ ಜನಾಂಗದವರನ್ನು ಕಾರ್ಯಕ್ರಮಕ್ಕೆ ಕರೆತರಲು ಜನಾಂಗದ ಮುಖಂಡರು ಇನ್ನಷ್ಟು ಶ್ರಮಿಸಬೇಕು ಎಂದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಯಾದವ ಜನಾಂಗದ ಮುಖಂಡರು ಪಾಲ್ಗೊಂಡಿದ್ದರು.
ಬೆಳಗ್ಗೆ ೧೧ ಗಂಟೆಗೆ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಸರ್ಕಾರಿ ಕಾರ್ಯಕ್ರಮ ಶುರುವಾಗಲಿದ್ದು ಕಾರ್ಯಕ್ರಮಕ್ಕೆ ತಾಲ್ಲೂಕಿನ ವಿವಿದೆಡೆಗಳಿಂದ ಬರುವ ಜನಾಂಗದವರಿಗೆ ಕುಳಿತು ಕೊಳ್ಳಲು ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಸುಸಜ್ಜಿತ ವೇದಿಕೆಯನ್ನು ನಿರ್ಮಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ಬಿಸಿಎಂ ಇಲಾಖೆಯ ಶಂಕರ್, ವಲಯ ಅರಣ್ಯಾಧಿಕಾರಿ ತಿಮ್ಮರಾಯಪ್ಪ, ಸಮುದಾಯದ ಮುಖಂಡರಾದ ಕೇಶವಮೂರ್ತಿ, ನಾರಾಯಣಸ್ವಾಮಿ, ರಾಮಕೃಷ್ಣಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!