ಶ್ರೀ ವಾಸವಿ ವಿದ್ಯಾ ಸಂಸ್ಥೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

- Advertisement -
- Advertisement -

ಶಿಡ್ಲಘಟ್ಟದ ಶ್ರೀ ವಾಸವಿ ವಿದ್ಯಾ ಸಂಸ್ಥೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಗಿಡ ನೆಡುವುದರ ಮೂಲಕ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ನಾಗೇಂದ್ರಪ್ಪ ಪರಿಸರ ಕುರಿತಾದ ಮಾಹಿತಿಯನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರ.ಮು.ಶಿ ವೆಂಕಟರಮಣಪ್ಪ ಪರಿಸರದ ಅವಶ್ಯಕತೆ, ಮಾಲಿನ್ಯದ ದುಷ್ಪರಿಣಾಮಗಳು, ಓಜೋನ್ ಪದರದ ಸದ್ಯದ ಪರಿಸ್ಥಿತಿಯನ್ನು ವಿವರವಾಗಿ ಮಕ್ಕಳಿಗೆ ತಿಳಿಸಿದರು. ಶಿಕ್ಷಕರಾದ ಅಮರನಾಥ್ ಮತ್ತು ನಾಗರಾಜ್ ರವರು ಮಕ್ಕಳಿಗೆ ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!