Home News ಸಮುದಾಯದ ಜೊತೆ ಶಾಲೆಯನ್ನು ಬೆಸೆಯುತ್ತದೆ ಪ್ರತಿಭಾ ಕಾರಂಜಿ

ಸಮುದಾಯದ ಜೊತೆ ಶಾಲೆಯನ್ನು ಬೆಸೆಯುತ್ತದೆ ಪ್ರತಿಭಾ ಕಾರಂಜಿ

0

ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವುದೊಂದಿಗೆ ಸಮುದಾಯವನ್ನು ಮತ್ತು ಶಾಲೆಯನ್ನು ಬೆಸೆಯುವ ಹಾಗೂ ಬಾಂಧವ್ಯ ಮೂಡಿಸುವ ಕೆಲಸವನ್ನು ಸಹ ಮಾಡುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ ತಿಳಿಸಿದರು.
ತಾಲ್ಲೂಕಿನ ತಾತಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಅಬ್ಲೂಡು ಕ್ಲಸ್ಟರ್ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಡ್ಲಘಟ್ಟ ತಾಲ್ಲೂಕಿನ ತಾತಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಅಬ್ಲೂಡು ಕ್ಲಸ್ಟರ್ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಛದ್ಮವೇಷ ಸ್ಪರ್ಧೆ ಹಾಗೂ ಜಾನಪದ ನೃತ್ಯದಲ್ಲಿ ಪಾಲ್ಗೊಂಡಿದ್ದ ಮಕ್ಕಳು.

ಸರ್ಕಾರ ಪ್ರತಿಭಾ ಕಾರಂಜಿಗೆಂದು ಹಣ ನೀಡುವುದಿಲ್ಲ. ಆದರೂ ಶಿಕ್ಷಕರು ಗ್ರಾಮಸ್ಥರ, ಮುಖಂಡರ ಸಹಕಾರವನ್ನು ಪಡೆಯುವ ಮೂಲಕ ತಾಲ್ಲೂಕಿನೆಲ್ಲೆಡೆ ಅತ್ಯುತ್ತಮವಾಗಿ ಪ್ರತಿಭಾ ಕಾರಂಜಿ ನಡೆಸುತ್ತಿದ್ದಾರೆ. ಪ್ರತಿಭಾ ಕಾರಂಜಿಯಿಂದ ಹಲವು ಉಪಯೋಗಗಳಿವೆ. ವಿದ್ಯಾರ್ಥಿಗಳ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯವಾಗುತ್ತದೆ. ಇದು ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುತ್ತದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ. ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಅಬ್ಲೂಡು ಕ್ಲಸ್ಟರ್ ನ 12 ಶಾಲೆಗಳ ವಿದ್ಯಾರ್ಥಿಗಳು ಕೋಲಾಟ, ಜನಪದ ನೃತ್ಯ, ಖವಾಲಿ, ದೇಶಭಕ್ತಿ ಗೀತೆ, ರಸಪ್ರಶ್ನೆ ಕಾರ್ಯಕ್ರಮ, ಕಂಠಪಾಠ, ಚಿತ್ರಕಲೆ, ಕ್ಲೇ ಮಾಡಲಿಂಗ್, ಭಕ್ತಿಗೀತೆ, ಅಭಿನಯ ಗೀತೆ,ಆಶುಭಾಷಣ, ಛದ್ಮವೇಷ ಮುಂತಾದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ತಾತಹಳ್ಳಿಯ ಜೈಭಾರತ್ ಯುವಕ ಸಂಘದ ಸದಸ್ಯರು, ಸಮನ್ವಯಾಧಿಕಾರಿ ರಾಜು, ಗ್ರಾಮ ಪಂಚಾಯ್ತಿ ಸದಸ್ಯೆ ಲಕ್ಷ್ಮೀದೇವಮ್ಮ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಸಿ.ಕೃಷ್ಣಪ್ಪ, ಮುಖ್ಯ ಶಿಕ್ಷಕಿ ಸರಸ್ವತಮ್ಮ, ಸಿಆರ್ಪಿಗಳಾದ ಸುರೇಶ್, ನಾಗರಾಜ್, ಶ್ರೀನಿವಾಸರೆಡ್ಡಿ, ಸಾದಿಕ್ಪಾಷ, ಸುಂದರಾಚಾರಿ, ಶಾರದಾಂಬ, ನೇತ್ರಾ, ವೆಂಕಟೇಶ್, ಚಂದ್ರಶೇಖರ್, ಮಂಜುನಾಥ್, ಗಂಗಾಧರ್, ನರಸಿಂಹರಾಜು ಹಾಜರಿದ್ದರು.
 

error: Content is protected !!