ಮುಂಬರುವ ಐದು ವರ್ಷಗಳಲ್ಲಿ ಬಯಲು ಸೀಮೆಯ ಕೋಲಾರ ಹಾಗು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕೆಲಸಕ್ಕೆ ಈಗಾಗಲೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದ ಚಾಲನೆ ನೀಡಲಾಗಿದೆ ಎಂದು ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದರು.
ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು ಎರಡು ಕೋಟಿ ರೂ ವೆಚ್ಚದ ಅಜ್ಜಕದಿರೇನಹಳ್ಳಿ-ತಿಮ್ಮನಾಯಕನಹಳ್ಳಿ ರಸ್ತೆ ಅಗಲೀಕರಣ ಹಾಗು ಡಾಂಬರೀಕರಣ ಕಾಮಗಾರಿ ಮತ್ತು ರಾಯಪ್ಪನಹಳ್ಳಿಯಲ್ಲಿ ಸುಮಾರು ೧೦ ಲಕ್ಷ ರೂವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಬೇಡ್ಕರ್ ಸಮುದಾಯ ಭವನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಈಗಾಗಲೇ ರಾಜ್ಯ ಸರ್ಕಾರದಿಂದ ಕೆಸಿ ವ್ಯಾಲಿ ಹಾಗು ಹೆಚ್.ಎನ್ ವ್ಯಾಲಿ ಕಾಮಗಾರಿಗೆ ಚಾಲನೆ ನೀಡಿದ್ದು ಕೋಲಾರ ಜಿಲ್ಲೆಯ ಬಹುತೇಕ ಕೆರೆಗಳಿಗೆ ಮುಂದಿನ ಎರಡು ತಿಂಗಳೊಳಗೆ ನೀರು ಬರಲಿದೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತರುವ ಕಾಮಗಾರಿ ಆರಂಭಗೊಂಡಿದ್ದುಮುಂದಿನ ಐದು ವರ್ಷಗಳೊಳಗೆ ಬಯಲುಸೀಮೆ ಭಾಗದ ಎಲ್ಲಾ ಕೆರೆಗಳು ತುಂಬಿ ಈ ಭಾಗದ ರೈತರ ಕಷ್ಟ ನಿವಾರಣೆಯಾಗಲಿದೆ ಎಂದರು.
ಅಭಿವೃದ್ದಿಯ ವಿಚಾರದಲ್ಲಿ ಯಾವುದೇ ರಾಜಕೀಯ ಬೆರಸದೇ ಎಲ್ಲರೂ ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ದಿಗೆ ಸಹಕರಿಸಬೇಕು. ಚುನಾವಣೆ ಸಮಯದಲ್ಲಿ ಮಾತ್ರ ನಾನು ಆ ಪಕ್ಷ ನೀನು ಈ ಪಕ್ಷ ಎಂಬುದು ಇರಲಿ ಚುನಾವಣೆ ನಂತರ ಆಯ್ಕೆಯಾದ ಜನಪ್ರತಿನಿಧಿಗಳು ಕ್ಷೇತ್ರದ ಸಮಸ್ತ ಜನರಏಳಿಗೆಗಾಗಿ ದುಡಿಯಬೇಕು ಎಂದರು.
ಇನ್ನು ತಾಲ್ಲೂಕಿನ ಸಾದಲಿ ಬಳಿ ಪಶು ಆಹಾರ ಘಟಕ ನಿರ್ಮಿಸಲು ಈಗಾಗಲೇ ಸ್ಥಳ ಗುರುತಿಸಿ ಸರ್ಕಾರಕ್ಕೆ ನೀಡಿದ್ದು ತಾಲೂಕಿನಲ್ಲಿ ನಿರ್ಮಾಣವಾದರೆ ಒಂದಷ್ಟು ನಿರುದ್ಯೋಗಿ ಯುವಕರಿಗೆ ಕೆಲಸ ನೀಡಿದಂತಾಗುತ್ತದೆ ಎಂಬ ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾಡಿದ ಮನವಿಗೆಸ್ಪಂದಿಸಿ ಮಾತನಾಡಿ ಈಗಾಗಲೇ ತಾಲೂಕಿನ ಎಸ್.ಗೊಲ್ಲಹಳ್ಳಿ ಗ್ರಾಮದ ಬಳಿ ಸುಮಾರು ೨೬ ಎಕರೆ ಜಾಗ ಸರ್ಕಾರಕ್ಕೆ ನೀಡಿದ್ದು ಪಶು ಆಹಾರ ಸಾಗಾಣಿಕೆ ಮಾಡಲು ಅನುಕೂಲವಾಗಿದೆ. ಈ ಬಗ್ಗೆ ಸರ್ಕಾರ ಹಾಗು ಕೆಎಂಎಫ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ ಸಾರ್ವಜನಿಕರ ಸಹಭಾಗಿತ್ವ ಸಂಪೂರ್ಣವಾಗಿ ಇದ್ದಾಗ ಮಾತ್ರವೇ ಸರಕಾರದ ಯಾವುದೆ ಯೋಜನೆ ಯಶಸ್ಸಾಗಲು ಸಾಧ್ಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೆ ಯೋಜನೆಯಾಗಲಿ ಯಶಸ್ಸು ಸಾಧ್ಯವಿಲ್ಲ. ಕಾಮಗಾರಿನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಅಭಿವೃದ್ದಿಗೆ ಸಹಕರಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಂಕ್ಮುನಿಯಪ್ಪ, ಕೆ.ಎಂ.ಸತೀಶ್ ಮುಖಂಡರಾದ ರಾಯಪ್ಪನಹಳ್ಳಿ ಅಶ್ವತ್ಥನಾರಾಯಣರೆಡ್ಡಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಯರಬಚ್ಚಪ್ಪ, ಡಿ.ಪಿ.ನಾಗರಾಜ್, ಶ್ರೀನಿವಾಸರೆಡ್ಡಿ, ಲಕ್ಮಿನಾರಾಯಣ, ಮಂಜುನಾಥ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯಎಸ್.ಶಶಿಧರ್, ವೆಂಕಟರೋಣಪ್ಪ, ಜಿಲ್ಲಾ ಸಮಾಜ ಕಲ್ಯಾಣಾದಿಕಾರಿ ಶೇಷಾಧ್ರಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಅನಸೂಯಮ್ಮ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -