ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿಭಟಿಸನೆ

- Advertisement -
- Advertisement -

ಶಿಡ್ಲಘಟ್ಟದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಸರ್ಕಾರಿ ಸೇವೆಗೆ ನೇಮಕಗೊಳ್ಳುವ ನೌಕರರಿಗೆ ನಿಶ್ಚಿತ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟಿಸಿದರು.
ಸರ್ಕಾರಿ ಸೇವೆಗೆ ನೇಮಕಗೊಳ್ಳುವ ನೌಕರರಿಗೆ ನಿಶ್ಚಿತ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ತಾಲ್ಲೂಕು ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಸದಸ್ಯರು ನಗರದಲ್ಲಿ ಶುಕ್ರವಾರ ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟಿಸಿದರು.
ನೂತನ ಪಿಂಚಣಿ ಯೋಜನೆಗೆ ಒಳಪಡುವ ನೌಕರರಿಗೆ ನ್ಯಾಯ ಒದಗಿಸಬೇಕು. ನೌಕರರ ಇಳಿವಯಸ್ಸಿನ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿ ಯೋಜನೆಯನ್ನು ಕೇಂದ್ರ ಸರ್ಕಾರವು 2004 ರ ನಂತರ ಹಾಗೂ ರಾಜ್ಯ ಸರ್ಕಾರವು 2006 ರ ನಂತರ ಸರ್ಕಾರಿ ಸೇವೆಗೆ ನೇಮಕಗೊಂಡಿರುವವರಿಗೆ ರದ್ದುಪಡಿಸಿದ್ದಾರೆ. ಅದನ್ನು ಮರುಸ್ಥಾಪಿಸಬೇಕೆಂದು ಹೋರಾಟ ನಡೆಸುತ್ತಿದ್ದೇವೆ. ಪ್ರಧಾನ ಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಪೋಸ್ಟ್ ಕಾರ್ಡ್ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನಗರದ ತಾಲ್ಲೂಕು ಕಛೇರಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ತಾಲ್ಲೂಕು ಪಂಚಾಯತಿ ಮುಂತಾದೆಡೆ ಸರ್ಕಾರಿ ನೌಕರರು ಕಪ್ಪು ಬ್ಯಾಡ್ಜ್ ಧರಿಸಿ ಕಾರ್ಯನಿರ್ವಹಿಸಿದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್, ಅಕ್ಕಲರೆಡ್ಡಿ, ನರಸಿಂಹರಾಜು, ವೀಣಾ, ವಿಜಯಮ್ಮ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!