ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು

- Advertisement -
- Advertisement -

ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಂತಹ ಮುಖ್ಯ ಜವಾಬ್ದಾರಿ ಶಿಕ್ಷರು ಹಾಗೂ ಪೋಷಕರ ಮೇಲೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘನಾಥರೆಡ್ಡಿ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ೨೦೧೬-೧೭ನೇ ಸಾಲಿನ ೧ನೇ ತರಗತಿಯಿಂದ ೭ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪಷ್ಟ ಓದು, ಶುದ್ಧ ಬರಹ, ಅಭಿವ್ಯಕ್ತಿ ಸ್ಪರ್ಧಾ ಮಾಸಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಕರಿದ್ದಾರೆ. ಇನ್ನು ಹೆಚ್ಚಿನ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಿ, ಸರ್ಕಾರದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಮಕ್ಕಳ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಶಿಕ್ಷಕರು ಹಾಗೂ ಪೋಷಕರು ಗಮನಿಸುತ್ತಿರಬೇಕು. ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿರುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳೆಸಿ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳನ್ನು ಪಡೆದು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸಹಕರಿಸುವ ಜೋತೆಗೆ ವಿದ್ಯಾರ್ಥಿಗಳ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಬಹುದು ಎಂದು ಹೇಳಿದರು.
೧ನೇ ತರಗತಿಯಿಂದ ೭ನೇ ತರಗತಿಯ ತಾಲ್ಲೂಕಿನ ಎಲ್ಲಾ ಶಾಲಾ ಮಕ್ಕಳು ಶಿಕ್ಷಕರು ಹಾಗೂ ಸಿಆರ್‌ಪಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಿಕ್ಷಕರಾದ ಸುಮ, ಮಂಜುಳಾ, ವೆಂಕಟೇಶ್, ರಂಗನಾಥ್, ಶ್ರೀರಾಮಯ್ಯ, ಬಿ.ವಿ.ನಾರಾಯಣಸ್ವಾಮಿ, ಮುನಿಯಪ್ಪ, ಸುದರ್ಶನ್, ಮುನಿರಾಜು, ಚಂದ್ರಶೇಖರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!