30.6 C
Sidlaghatta
Monday, February 23, 2026

ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಲಭಿಸುತ್ತಿದೆ

- Advertisement -
- Advertisement -

ಪ್ರತಿಯೊಬ್ಬ ವಿದ್ಯಾರ್ಥಿಗೂ ಇಲಾಖೆಯಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಒದಗಿಸುವುದರೊಂದಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಗ್ರಾಮ ಪಂಚಾಯತಿ ಸದಸ್ಯ ಎ.ಎಂ.ತ್ಯಾಗರಾಜು ಹೇಳಿದರು.
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ೨೦೧೬-–೧೭ ನೇ ಶೈಕ್ಷಣಿಕ ಸಾಲಿನ ಶಾಲೆ ಪ್ರಾರಂಭೊತ್ಸವ ಹಾಗೂ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮದ ಸರ್ಕಾರಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರೂ ಶ್ರಮಿಸಬೇಕು ಎಂದರು.
ಸರ್ಕಾರ ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ ನೀಡಬೇಕೆಂಬ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದರೂ ಸರ್ಕಾರಿ ಶಾಲೆಗಳನ್ನು ಬಿಟ್ಟು ಖಾಸಗಿ ಕಾನ್ವೆಂಟ್‌ಗಳ ಮೊರೆ ಹೋಗುವುದನ್ನು ಪೋಷಕರು ಬಿಡಬೇಕು. ಮಕ್ಕಳನ್ನು ಶಾಲೆಗೆ ಕಳುಹಿಸಿದರಷ್ಟೇ ಸಾಲದು ಬದಲಿಗೆ ಮಗುವಿನ ಶಿಕ್ಷಣದ ಬಗ್ಗೆ ಪೋಷಕರು ನಿಗಾವಹಿಸಿ ಆಗಾಗ ಶಾಲೆಗೆ ಭೇಟಿ ನೀಡಿ ತಮ್ಮ ಮಗುವಿನ ಬಗ್ಗೆ ಶಿಕ್ಷಕರೊಂದಿಗೆ ಚರ್ಚೆ ನಡೆಸಿದರೆ ಮಗು ಉತ್ತಮ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದರು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ್, ಸದಸ್ಯ ದಾಸಪ್ಪ, ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ, ಶಿಕ್ಷಕ ಚಾಂದ್‌ಪಾಷ, ಶಿಕ್ಷಕಿ ಭಾರತಿ, ಗ್ರಾಮಸ್ಥ ಹನುಮಂತರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!