27.1 C
Sidlaghatta
Tuesday, February 3, 2026

ಸಹಕಾರ ರತ್ನ ಪ್ರಶಸ್ತಿಗೆ ಹೊಸಪೇಟೆ ಗ್ರಾಮದ ಕೆ.ಗುಡಿಯಪ್ಪ ಆಯ್ಕೆ

- Advertisement -
- Advertisement -

ತಾಲ್ಲೂಕಿನ ಹೊಸಪೇಟೆ ಗ್ರಾಮದ ಕೆ.ಗುಡಿಯಪ್ಪ 2015–16ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವೆಂಬರ್ 18 ರಂದು ಬೆಂಗಳೂರಿನಲ್ಲಿ ನಡೆಯುವ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ನಂದಿನಿ ಹಾಲು ಉತ್ಪಾದಕರ ವಿವಿದೋದ್ಧೇಶ ಸಹಕಾರ ಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಗುಡಿಯಪ್ಪ(71) ಕಳೆದ ಐವತ್ತು ವರ್ಷಗಳಿಂದ ವಿವಿಧ ವರ್ಗದ ಸಹಕಾರಿ ಸಂಘ ಸಂಸ್ಥೆಗಳಲ್ಲಿ ಹಾಗೂ ಸಾರ್ವಜನಿಕ ಸರ್ಕಾರಿ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದಾರೆ. ತಾಲ್ಲೂಕು ಮಟ್ಟದ ಸಾರ್ವಜನಿಕ ಸರ್ಕಾರಿ ಸಂಸ್ಥೆಗಳಾದ ಭೂ ಅಭಿವೃದ್ಧಿ ಬ್ಯಾಂಕ್, ಟಿ.ಎ.ಪಿ.ಎಂ.ಎಸ್, ಎಸ್.ಎಫ್.ಎಸ್.ಸಿ.ಎಸ್, ಮಂಡಲ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಚುನಾಯಿತ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ.
192 ರಲ್ಲಿ ಅಮೂಲ್ ಮಾದರಿಯ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಹೊಸಪೇಟೆ ಗ್ರಾಮದಲ್ಲಿ ಸ್ಥಾಪಿಸಿ ಅಧ್ಯಕ್ಷರಾಗಿ, 1983 ರಲ್ಲಿ ಬೆಂಗಳೂರು ಹಾಲು ಒಕ್ಕೂಟದ ಆಡಳಿತ ಮಂಡಳಿಗೆ ಶಿಡ್ಲಘಟ್ಟ ತಾಲ್ಲೂಕಿನಿಂದ ಆಯ್ಕೆಯಾಗಿ ಆಡಳಿತ ಮಂಡಳಿಯ ಸದಸ್ಯರಾಗಿದ್ದರು. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಸ್ಥಾಪನೆಯಾದಾಗಿಂದ 2014 ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಆಯ್ಕೆಯಾಗಿ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರಾಗಿ, ಮೂರು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
2012–13 ರಲ್ಲಿ ಶಿಡ್ಲಘಟ್ಟದಲ್ಲಿ ನಂದಿನಿ ಹಾಲು ಉತ್ಪಾದಕರ ವಿವಿದೋದ್ಧೇಶ ಸಹಕಾರ ಸಂಘವನ್ನು ಸ್ಥಾಪಿಸಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!