ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ ಜ್ಞಾನಮಂದಿರದಲ್ಲಿ ಗುರುವಾರ ಶತಮಾನೋತ್ಸವ ಪೂಜಾ ಕಾರ್ಯಕ್ರಮದಲ್ಲಿ ವಿಶೇಷ ಹೋಮಗಳನ್ನು ನಡೆಸಲಾಯಿತು.
ಗಣ ಹೋಮ, ಗಜಗೌರಿ ಹೋಮ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಹೋಮ, ಸುದರ್ಶನ ಹೋಮ, ಮೃತ್ಯುಂಜಯ ಹೋಮವನ್ನು ನಡೆಸಲಾಯಿತು. ಸಾಯಿಬಾಬಾ, ಗಣಪತಿ ಮತ್ತು ಅಯ್ಯಪ್ಪಸ್ವಾಮಿ ದೇವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು. ನೂರಾರು ಭಕ್ತರು ದೇವರ ಪೂಜೆಯಲ್ಲಿ ಪಾಲ್ಗೊಂಡರು. ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಸಲಾಯಿತು.
ನವರಾತ್ರಿ ಪ್ರಯುಕ್ತ ದುರ್ಗಾಪೂಜೆಯನ್ನು ಮಾಡಲಾಗಿತ್ತು. ಸೀತಾಮರಾಮಲಕ್ಷ್ಮಣರೊಂದಿಗೆ ದುರ್ಗೆಯ ಒಂಭತ್ತು ಪ್ರತಿರೂಪಗಳ ಪೂಜೆಯನ್ನು ನಡೆಸಲಾಯಿತು.
ಸೇವಾಕರ್ತರಾದ ಶಾಸಕ ವಿ.ಮುನಿಯಪ್ಪ, ರತ್ನಮ್ಮ ಮುನಿಯಪ್ಪ, ಶ್ರೀ ಸಾಯಿನಾಥ ಜ್ಞಾನಮಂದಿರ ದೇವಾಲಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಸೇವಾಕರ್ತರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







