27.9 C
Sidlaghatta
Sunday, October 12, 2025

ಸಾಯಿನಾಥ ಜ್ಞಾನ ಮಂದಿರದಲ್ಲಿ ಹತ್ತನೇ ವಾರ್ಷಿಕೋತ್ಸವ ಆಚರಣೆ

- Advertisement -
- Advertisement -

ತಾಲ್ಲೂಕಿನ ಮಳ್ಳೂರಿನ ಸಮೀಪದ ಸಾಯಿನಾಥ ಜ್ಞಾನ ಮಂದಿರದಲ್ಲಿ ಭಾನುವಾರ ಹತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾ ಹೋಮ ಹಾಗೂ ಗಿರಿಜಾ ಕಲ್ಯಾಣೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಶನಿವಾರದಿಂದ ಪ್ರಾರಂಭಗೊಂಡ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಹಾಗಣಪತಿ, ಸಾಯಿಬಾಬಾ, ಅಯ್ಯಪ್ಪಸ್ವಾಮಿ, ಸುಬ್ರಹ್ಮಣ್ಯೇಶ್ವರಸ್ವಾಮಿ ಮತ್ತು ಜಲಕಂಠೇಶ್ವರ ಸ್ವಾಮಿಗೆ ವಿಶೇಷ ಅಲಂಕಾರಗಳೊಂದಿಗೆ ಪೂಜೆಗಳು ನಡೆದವು. ಗಣ ಹೋಮ ಮತ್ತು ಚಂಡಿಕಾ ಹೋಮಗಳು ನಡೆದವು. ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಪಾರಾಯಣ, ಕನಕದಾಸರ ಸ್ತೋತ್ರ, ಶ್ರೀಚಕ್ರಕ್ಕೆ ಅಭಿಷೇಕ ನಡೆದು ಗಿರಿಜಾ ಕಲ್ಯಾಣೋತ್ಸವದಲ್ಲಿ ಸುಮಂಗಲಿಯರಿಂದ ಕುಂಕುಮಾರ್ಚನೆಯು ನಡೆಯಿತು. ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಭಕ್ತರಿಗೆ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಸಾಯಿನಾಥ ಜ್ಞಾನ ಮಂದಿರದ ಕಾರ್ಯಕಾರಿ ಸಮಿತಿಯ ಕೆ.ಎಸ್.ಮುನಿನಾರಾಯಣಪ್ಪ, ನಾರಾಯಣಸ್ವಾಮಿ, ರಾಮರೆಡ್ಡಿ, ವೆಂಕಟೇಶ್, ಅಮರ್, ಮಂಜುನಾಥ, ಮುನಿಕೃಷ್ಣ, ಎಂ.ವಿ.ವೆಂಕಟರಾಂ, ಗೋವಿಂದಪ್ಪ, ಕೇಶವನಾರಾಯಣ, ವೈ.ಎಂ.ದೇವರಾಜ್, ಲಕ್ಷ್ಮೀಪತಿ, ಸೀತಾರಾಮರೆಡ್ಡಿ ಮತ್ತಿತರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!