ತಾಲ್ಲೂಕಿನ ಎಲ್ಲಾ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ವಿವಿಧ ಸರ್ಕಾರಿ ಯೋಜನೆಗಳು ಸಿಗಲು ಬೇಕಾದ ದಾಖಲೆಗಳನ್ನು ಒಟ್ಟುಗೂಡಿಸಿಕೊಳ್ಳಲು ನೆರವು ನೀಡಲೆಂದು ಎಸ್.ಎನ್.ಕ್ರಿಯಾ ಟ್ರಸ್ಟ್ನ ಕಛೇರಿಯನ್ನು ನಗರದ ಬಸ್ ನಿಲ್ದಾಣದ ಬಳಿ ಆರಂಭ ಮಾಡುತ್ತಿರುವುದಾಗಿ ಎಸ್.ಎನ್. ಕ್ರಿಯಾ ಟ್ರಸ್ಟ್ನ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು.
ನಗರದ ಬಸ್ ನಿಲ್ದಾಣದ ಬಳಿ ಭಾನುವಾರ ಎಸ್.ಎನ್.ಕ್ರಿಯಾ ಟ್ರಸ್ಟ್ನ ಕಛೇರಿಯ ಪೂಜೆ ಸಲ್ಲಿಸಿ, ಅಂಧ ಮಕ್ಕಳ ಶಾಲೆಯಲ್ಲಿ ಸಿಹಿ ವಿತರಿಸಿ, ಅಂಗವಿಕಲ ಮಕ್ಕಳಿಗೆ ವೀಲ್ ಚೇರನ್ನು ಸಂಸ್ಥೆಯಿಂದ ನೀಡಿ ಅವರು ಮಾತನಾಡಿದರು.
ನಮ್ಮ ಟ್ರಸ್ಟ್ ವತಿಯಿಂದ ಹಲವು ತಿಂಗಳುಗಳಿಂದ ಸಾಮಾಜಿಕ ಸೇವೆ ಸಲ್ಲಿಸುದ್ದೇವೆ. ಆರೋಗ್ಯದ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿರುವೆವು. ಈ ಸೇವೆ ಜನರಿಗೆ ಸಮರ್ಪಕವಾಗಿ ತಲುಪಬೇಕೆಂಬ ಉದ್ದೇಶದಿಂದ ಈಗ ಕಛೇರಿಯನ್ನು ಪ್ರಾರಂಭ ಮಾಡಿದ್ದೇವೆ. ತಾಲ್ಲೂಕಿನ ಜನರು ವೃದ್ಧಾಪ್ಯವೇತನ, ವಿಧವಾ ವೇತನ ಮುಂತಾದ ಹಲವು ಯೋಜನೆಗಳಿಗೆ ಬೇಕಾದ ದಾಖಲೆಗಳ ವಿವರ ಹಾಗೂ ನೆರವನ್ನು ಪಡೆದುಕೊಳ್ಳಬೇಕೆಂದು ಕೋರಿದರು.
- Advertisement -
- Advertisement -
- Advertisement -