20.7 C
Sidlaghatta
Tuesday, June 17, 2025

ಸಾರ್ವಜನಿಕ ಆಸ್ತಿ ಬಗ್ಗೆ ಕಾಳಜಿ ಇರಲಿ

- Advertisement -
- Advertisement -

ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೆ ಅಭಿವೃದ್ದಿ ಕಾಮಗಾರಿಯನ್ನು ಉಪೇಕ್ಷಿಸದೆ, ಸಾರ್ವಜನಿಕ ಆಸ್ತಿ ಎನ್ನುವ ಮನೋಭಾವ ಎಲ್ಲಾ ಗ್ರಾಮಸ್ಥರಲ್ಲೂ ಮೂಡಬೇಕಿದೆ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಲ್ಲಪನಹಳ್ಳಿ ಹಾಗು ಅತ್ತಿಗಾನಹಳ್ಳಿ ಗ್ರಾಮದಲ್ಲಿ ತಲಾ ೫ ಲಕ್ಷ ರೂಗಳ ಸಿಸಿ ರಸ್ತೆ ಕಾಮಗಾರಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಭಿವೃದ್ದಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ದಿಗಾಗಿ ಶ್ರಮಿಸಬೇಕಿದೆ. ಆಗ ಮಾತ್ರ ಎಲ್ಲಾ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ನೈರ್ಮಲೀಕರಣ ಇನ್ನಿತರೆ ಮೂಲ ಸೌಕರ್ಯಗಳನ್ನು ಕಾಣಲು ಸಾಧ್ಯ. ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗಾಗಿ ಪ್ರಯತ್ನ ನಡೆಸಿದ್ದು ಬಹುತೇಕ ಗ್ರಾಮಗಳಿಗೆ ಈಗಾಗಲೇ ರಸ್ತೆ ಸೇರಿದಂತೆ ವಿವಿಧ ಮೂಲಭೂತ ಸವಲತ್ತು ಕಲ್ಪಿಸಲಾಗಿದೆ ಎಂದರು.
ಗ್ರಾಮಗಳಲ್ಲಿ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಅಭಿವೃದ್ದಿಗೆ ಸಹಕರಿಸಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದರಿಂದ ಆರೋಗ್ಯವೂ ಸುಧಾರಿಸುತ್ತದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಮುನಿನರಸಮ್ಮ, ಮುಖಂಡರಾದ ಮುನಿಯಪ್ಪ, ಚನ್ನಪ್ಪ, ವೆಂಕಟೇಶ್, ನಾರಾಯಣಸ್ವಾಮಿ, ಚೌಡಪ್ಪ ಮತ್ತಿತರರು ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!