33.1 C
Sidlaghatta
Thursday, April 18, 2024

ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ತಪಾಸಣಾ ಶಿಬಿರ

- Advertisement -
- Advertisement -

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಬಿಪಿಎಲ್‌ ಕಾರ್ಡುದಾರರಿಗೆ ಬೆಂಗಳೂರಿನ ಸಾಗರ್‌ ಆಸ್ಪತ್ರೆಯ ತಜ್ಞ ವೈದ್ಯರು ಉಚಿತ ತಪಾಸಣಾ ಶಿಬಿರವನ್ನು ನಡೆಸಿಕೊಟ್ಟರು.
ಹೃದಯ ರೋಗ ಹಾಗೂ ಮೂತ್ರಪಿಂಡದ ಖಾಯಿಲೆಗಳ ತಜ್ಞ ವೈದ್ಯರು ಆಗಮಿಸಿದ್ದು, ತಪಾಸಣೆಯನ್ನು ನಡೆಸಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ಸರ್ಕಾರದ ಖರ್ಚಿನಲ್ಲೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಹಾಗೂ ಔಷದೋಪಚಾರವನ್ನು ನೀಡಲಾಗುತ್ತಿದೆ. ತಿಂಗಳಿಗೊಮ್ಮೆ ನಡೆಯುವ ಈ ವಾಜಪೇಯಿ ಆರೋಗ್ಯಶ್ರೀ ಶಿಬಿರವನ್ನು ಗ್ರಾಮೀಣ ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ಎಂದು ಈ ಸಂದರ್ಭದಲ್ಲಿ ವೈದ್ಯರು ತಿಳಿಸಿದರು.
ಸುಮಾರು 150 ಮಂದಿ ತಪಾಸಣೆಗೆ ಬಂದಿದ್ದು ಅವರಲ್ಲಿ 20 ಮಂದಿಯನ್ನು ಹೆಚ್ಚಿನ ಶಸ್ತ್ರಚಿಕಿತ್ಸೆಗಾಗಿ ಆಯ್ಕೆ ಮಾಡಲಾಗಿದ್ದು, ಅವರಲ್ಲಿ 10 ಮಂದಿ ಈಗಾಗಲೇ ಹೊರಟಿದ್ದು ಅವರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿರುವುದಾಗಿ ಅವರು ತಿಳಿಸಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್‌, ವಾಜಪೇಯಿ ಆರೋಗ್ಯಶ್ರೀ ಜಿಲ್ಲಾ ಸಂಯೋಜಕ ನಯಾಜ್‌ ಖಾನ್‌, ಸಾಗರ್‌ ಆಸ್ಪತ್ರೆಯ ತಜ್ಞ ವೈದ್ಯ ಡಾ.ಕೃಷ್ಣಪ್ಪ, ಡಾ.ಪ್ರಕಾಶ್‌, ಅಕ್ಕಲರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!