ಸಾರ್ವಜನಿಕ ಆಸ್ಪತ್ರೆಯ ಸಾಮಾನ್ಯ ಸದಸ್ಯರ ಸಮಿತಿ ರಚನೆ

- Advertisement -
- Advertisement -

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಸಾಮಾನ್ಯ ಸದಸ್ಯರ ಸಮಿತಿ ರಚಿಸಲಾಯಿತು.
ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಂ.ರಾಜಣ್ಣ, ಕಾರ್ಯದರ್ಶಿಯಾಗಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಅನಿಲ್ಕುಮಾರ್, ತಹಶಿಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ, ಕಾರ್ಯನಿರ್ವಾಹಣಾಧಿಕಾರಿ ಹಾಗೂ ಒಬ್ಬ ಮಹಿಳೆಯನ್ನು ಒಳಗೊಂಡ ಚುನಾಯಿತಿ ಜನಪ್ರತಿನಿಧಿಗಳನ್ನು ಒಳಗೊಂಡ ಸದಸ್ಯರ ಸಮಿತಿಯನ್ನು ರಚಿಸಿ ಅನುಮೋದನೆ ನೀಡಲಾಯಿತು.
ಶಾಸಕ ಎಂ.ರಾಜಣ್ಣ ಮಾತನಾಡಿ, ಸಮಿತಿ ರಚನೆಯ ಉದ್ದೇಶ ತಾಲ್ಲೂಕಿನಾದ್ಯಂತ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಸಿಗಬೇಕು. ಆಸ್ಪತ್ರೆಯಲ್ಲಿನ ಕೊರತೆಗಳನ್ನು ನೀಗಿಸಬೇಕು. ವೈದ್ಯರು ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು. ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ನೇಮಕಾತಿಗಳು ನಡೆಯಲಿವೆ. ಔಷಧಿಗಳ ಕೊರತೆಯನ್ನೂ ಸರಿಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಅನಿಲ್ಕುಮಾರ್, ಪ್ರಥಮ ಸಭೆಯಲ್ಲಿ ಆಸ್ಪತ್ರೆಗೆ ಬೇಕಾಗುವ ಅಗತ್ಯ ಔಷಧಿಗಳ ಖರೀದಿಗೆ ನೇರವಾಗಿ 56 ಸಾವಿರ ರೂಗಳನ್ನು ಆಡಳಿತಾಧಿಕಾರಿಗಳು ಉಪಯೋಗಿಸಬಹುದು. ಹೆಚ್ಚಿನ ಮೊತ್ತಕ್ಕೆ ಸಮಿತಿಯ ಅನುಮೋದನೆ ಪಡೆಯಬೇಕು ಎಂದು ತೀರ್ಮಾನಿಸಲಾಗಿದೆ. ಆಸ್ಪತ್ರೆಯಲ್ಲಿ ಸಮಸ್ಯೆಗಳಾದ ನೀರು, ವಿದ್ಯುತ್, ಸಲಕರಣೆಗಳ ಕೊರತೆಯನ್ನು ಅತಿಶೀಘ್ರವಾಗಿ ಸರಿಪಡಿಸಲು ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಿದೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಗಣಪತಿ ಸಾಕರೆ, ಜಬೀವುಲ್ಲಾ, ಟಿ.ಬಾಬು, ಸುಬ್ರಮಣಿ, ಅಫ್ಸರ್ಪಾಷ, ಶ್ರೀನಿವಾಸ್, ಸುನಂದಮ್ಮ, ನವೀನ್ಕುಮಾರ್, ಕಿರಣ್ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!