20 C
Sidlaghatta
Sunday, October 12, 2025

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ಪುಸ್ತಕ ಪ್ರದರ್ಶನ

- Advertisement -
- Advertisement -

ಉತ್ತಮ ಓದುಗರನ್ನು ಗುರುತಿಸಿ ಗೌರವಿಸುವ ಹಾಗೂ ಓದುಗರನ್ನು ಆಕರ್ಷಿಸುವ ಮೂಲಕ ಗ್ರಂಥಾಲಯದಲ್ಲಿ ಪುಸ್ತಕ ಸ್ನೇಹಿ ಪರಿಸರವನ್ನು ರೂಪಿಸುತ್ತಿರುವುದಾಗಿ ಸಹಗ್ರಂಥಪಾಲಕಿ ಕೆ.ಶಶಿಕಲಾ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಿದ್ದು, ಗ್ರಂಥಾಲಯದ ಪಿತಾಮಹ ಡಾ. ಎಸ್.ವಿ. ರಂಗನಾಥನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಪ್ರಸ್ತುತ 1420 ಗ್ರಂಥಾಲಯ ಸದಸ್ಯರಿದ್ದು, ಈ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ವಾರದ ಕಾಲ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಿದೆ. ದಿನಪತ್ರಿಕೆ ಹಾಗೂ ವಾರಪತ್ರಿಕೆಗಳನ್ನು ಓದುವವರೂ ಸಾಕಷ್ಟು ಮಂದಿ ಬರುತ್ತಿದ್ದು, ಓದುಗರಿಗೆ ಅನುಕೂಲಕರ ವಾತಾವರಣವನ್ನು ಸೃಷ್ಠಿಸಿ, ಉತ್ತಮ ಓದುಗರನ್ನು ಗೌರವಿಸುವ ಕಾರ್ಯವನ್ನೂ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಗ್ರಂಥಾಲಯದ ಸಹಾಯಕರಾದ ಎನ್.ಶ್ರೀರಾಮ್, ಗೀತಾ, ನವೀನ್ಕುಮಾರ್, ಹಂಡಿಗನಾಳ ಗ್ರಂಥಾಲಯದ ಮೇಲ್ವಿಚಾರಕ ಮುನಿರಾಜು, ತುಮ್ಮನಹಳ್ಳಿ ಗ್ರಂಥಾಲಯದ ಮೇಲ್ವಿಚಾರಕ ದೇವಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!