27.5 C
Sidlaghatta
Wednesday, July 30, 2025

ಸಾಹಿತ್ಯ ಕ್ಷೇತ್ರದ ಮೇರು ಪರ್ವತ ಕುವೆಂಪು

- Advertisement -
- Advertisement -

ಕುವೆಂಪು ಅವರು ಕನ್ನಡ ಸಾಹಿತ್ಯ ಮಾತ್ರವಲ್ಲದೆ ಭಾರತೀಯ ಸಾಹಿತ್ಯ ಕ್ಷೇತ್ರದ ಮೇರು ಪರ್ವತವಾಗಿದ್ದರು. ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ ಕುವೆಂಪು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಾಡಹಬ್ಬಗಳ ಆಚರಣಾ ಸಮಿತಿಯಿಂದ ಆಚರಿಸಿದ ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.
ಕುವೆಂಪು ಅವರು ಮಾನವ ಕುಲಕ್ಕೆ ನೀಡಿದ ಆದರ್ಶಗಳು ಸಾರ್ವಕಾಲಿಕ. ಕನ್ನಡಕ್ಕೆ ಹೊಸ ನುಡಿಗಟ್ಟು ಹಾಗೂ ಹೊಸ ಕಲ್ಪನೆಗಳನ್ನು ನೀಡಿ ಹೊಸಗನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಧೀಮಂತ ಸಾಹಿತಿ. ಕುವೆಂಪು ಅವರ ಬಹುತೇಕ ಕೃತಿಗಳಲ್ಲಿ ಮಾನವೀಯತೆಯ ಸಂದೇಶ ಅಡಗಿದೆ. ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವಾದ ಡಿಸೆಂಬರ್ 29 ಅನ್ನು ಪ್ರತಿ ವರ್ಷ ‘ವಿಶ್ವ ಮಾನವ ದಿನಾಚರಣೆ’ಯನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಸೂಕ್ತವಾಗಿದೆ ಎಂದರು.

ಕುವೆಂಪು ಭಾವಚಿತ್ರವಿರುವ ಪಲ್ಲಕ್ಕಿಯನ್ನು ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೂ ಮೆರವಣಿಗೆ ಮಾಡಲಾಯಿತು

ಇಂದಿನ ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಅಭಿರುಚಿ ಕಡಿಮೆಯಾಗುತ್ತಿದೆ. ಕುವೆಂಪು ಅವರ ಕೃತಿಗಳನ್ನು ಓದಿದಾಗ, ಕನ್ನಡ ಭಾಷೆಯ ಶ್ರೀಮಂತಿಕೆಯ ಅರಿವು ನಮಗಾಗುತ್ತದೆ. ಆಧುನಿಕ ಯುಗದಲ್ಲಿ ಮೊಬೈಲ್, ಸಾಮಾಜಿಕ ತಾಣಗಳ ವೀಕ್ಷಣೆಯಲ್ಲೇ ಮಗ್ನರಾಗಿರುವ ಮಕ್ಕಳು ಪುಸ್ತಕಗಳತ್ತ ಆಸಕ್ತಿ ವಹಿಸಬೇಕು ಎಂದು ಹೇಳಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೆಂಕಟೇಶ್ ಕುವೆಂಪು ಅವರ ಬಾಲ್ಯ, ಶಿಕ್ಷಣ, ವೃತ್ತಿ ಜೀವನ, ಸಾಹಿತ್ಯ ಕೃಷಿ, ಕೃತಿಗಳು, ಗೌರವ ಪುರಸ್ಕಾರಗಳ ಬಗ್ಗೆ ವಿವರಿಸಿದರು.
ತಾಲ್ಲೂಕು ಮಟ್ಟದ ಕುವೆಂಪು ಕುರಿತಾದ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕುವೆಂಪು ಭಾವಚಿತ್ರವಿರುವ ಪಲ್ಲಕ್ಕಿಯನ್ನು ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೂ ಮೆರವಣಿಗೆ ಮಾಡಲಾಯಿತು.
ನಗರಸಭೆ ಪ್ರಭಾರಿ ಅಧ್ಯಕ್ಷೆ ಪ್ರಭಾವತಿ ಸುರೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಚಂದ್ರಶೇಖರಬಾಬು, ಸಿಡಿಪಿಒ ಲಕ್ಷ್ಮೀದೇವಮ್ಮ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಕೇಶವರೆಡ್ಡಿ, ಗ್ರೇಡ್ 2 ತಹಶೀಲ್ದಾರ್ ಮುನಿಕೃಷ್ಣಪ್ಪ, ಜೆ.ಎಸ್.ವೆಂಕಟಸ್ವಾಮಿ, ಗುರುರಾಜರಾವ್, ನಾರಾಯಣಸ್ವಾಮಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!