ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಆಗ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸವಲತ್ತುಗಳಾದ ರಸ್ತೆ, ಚರಂಡಿ, ಕುಡಿಯುವ ನೀರು, ನೈರ್ಮಲೀಕರಣ ದಂತಹ ಕಾಮಗಾರಿಗಳು ಮಾಡಲು ಸಾಧ್ಯವಾಗುತ್ತದೆ ಎಂದು ಶಾಸಕ ಎಂ ರಾಜಣ್ಣ ಹೇಳಿದರು.
ತಾಲ್ಲೂಕಿನ ಮಳ್ಳೂರು, ಕಾಚಹಳ್ಳಿ ಹಾಗು ಅಂಕತಟ್ಟಿ ಗ್ರಾಮಗಳಲ್ಲಿ ತಲಾ ೫ ಲಕ್ಷ ರೂಗಳ ಸಿಸಿ ರಸ್ತೆ ಕಾಮಗಾರಿಗೆ ಶನಿವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಎತ್ತಿನಹೊಳೆ ಯೋಜನೆಯಡಿ ತಾಲ್ಲೂಕಿನ ೧೦ ಗ್ರಾಮಗಳಿಗೆ ತಲಾ ೫ ಲಕ್ಷದಂತೆ ೫೦ ಲಕ್ಷ ರೂ ಮಂಜೂರಾಗಿದ್ದು ಇದೀಗ ಮೇಲಿನ ಮೂರು ಗ್ರಾಮಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಇದೀಗ ಗ್ರಾಮಗಳಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆವಹಿಸಿ ಕಾಲ ಕಾಲಕ್ಕೆ ಕಾಮಗಾರಿಯ ಮೇಲೆ ನಿಗಾವಹಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಶಿವಕುಮಾರ್, ಉಪಾಧ್ಯಕ್ಷ ಗೋಪಾಲಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಮುನಿಯಪ್ಪ, ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್, ಮುಖಂಡರಾದ ರಾಜೇಶ್, ಮಂಜುನಾಥಬಾಬು, ಸುಬ್ಬಾರೆಡ್ಡಿ, ಅಶೋಕ್, ಗುತ್ತಿಗೆದಾರ ಮಂಜುನಾಥ್, ನವೀನ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







