ಸುಂಡರಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆಗೆ ಜಿಲ್ಲಾಧಿಕಾರಿಗಳ ಭೇಟಿ

- Advertisement -
- Advertisement -

ತಾಲ್ಲೂಕಿನ ಸುಂಡ್ರಹಳ್ಳಿಯಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಗೆ ಬುಧವಾರ ಜಿಲ್ಲಾಧಿಕಾರಿ ಆರ್.ಲತಾ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ತಾಲ್ಲೂಕಿನ ಸುಂಡರಹಳ್ಳಿ ಗ್ರಾಮದಲ್ಲಿ ಸುಮಾರು 10 ಎಕರೆ ವಿಶ್ತಿರಣದಲ್ಲಿ ನಿರ್ಮಿಸಿರುವ ವಸತಿ ಶಾಲೆಯಲ್ಲಿ ಸುಮಾರು 300 ವಿದ್ಯಾರ್ಥಿಗಳು ಇದ್ದಾರೆ. ಜಿಲ್ಲಾಧಿಕಾರಿ ಆರ್.ಲತಾ ಅವರು ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಊಟ, ವಸತಿ, ಸೌಕರ್ಯ ಬೋಧನೆ ಸೇರಿದಂತೆ ಸರ್ಕಾರದಿಂದ ಮಕ್ಕಳಿಗೆ ಸಿಗಬೇಕಾದ ಯೋಜನೆಗಳು, ಪೌಷ್ಠಿಕ ಆಹಾರ ಹಾಗೂ ಮೂಲಭೂತ ಸೌಕರ್ಯಗಳು ಮಕ್ಕಳಿಗೆ ತಲುಪುತ್ತಿದೆಯೇ ಎಂದು ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಕ್ಕಳ ವಿದ್ಯಾಭ್ಯಾಸಕ್ಕೆ ಮೀಸಲಿಟ್ಟ ಶಾಲಾ ಕೊಠಡಿಗಳು, ಊಟದ ಕೊಠಡಿ, ಅಡಿಗೆ ಮನೆ, ಗೋಧಾಮ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಇಲ್ಲಿನ ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳ ಚಟುವಟಿಕೆಯ ಮಾತುಗಳನ್ನು ಕೇಳಿ, ಶಿಕ್ಷಣಕ್ಕೆ ಬೇಕಾದ ಮೂಲ್ಲಭೂತ ಸೌಕರ್ಯಗಳು ಹಾಗೂ ಸ್ವಚ್ಛ ಪರಿಸರವನ್ನು ಕಂಡ ಜಿಲ್ಲಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು.
ವಸತಿ ಶಾಲೆಯಲ್ಲಿ ನೀರಿ ಸಮಸ್ಯೆ ಇದೆ ಎಂದು ತಿಳಿಸಿದಾಗ ಕೂಡಲೇ ಫೋನ್ ಮುಂಖಾತರ ಕರ್ನಾಟಕ ವಸತಿ ಶಿಕ್ಷಣ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರನ್ನು ಸಂಪರ್ಕಿಸಿ ಕೂಡಲೇ ವಸತಿ ನಿಲಯಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದರು.
ಈಗಾಗಲೇ ವಸತಿ ಶಾಲೆಗೆ ಒಂದು ಕೊಳವೆ ಬಾವಿ ಮಂಜೂರಾಗಿದ್ದು, ಅತಿ ಶೀಘ್ರದಲ್ಲಿ ಕೊಳವೆ ಬಾವಿ ಕೊರೆಸಿ ನೀರಿನ ಸಮಸ್ಯೆ ಬಗೆಹರಿಸಿ ಸೌಕರ್ಯ ಕಲ್ಪಿಸುವುದಾಗಿ ತಿಳಿಸಿದರು.
ಉಪ ವಿಭಾಗಾಧಿಕಾರಿ ರಘುನಂದನ್, ತಹಶೀಲ್ದಾರ್ ಎಂ.ದಯಾನಂದ್, ಮುಖ್ಯಶಿಕ್ಷಕರಾದ ಆರ್.ಮೂರ್ತಪ್ಪ, ವಿಜಯಶ್ರೀ, ಶಿಕ್ಷಕರಾದ ವೆಂಕಟಸ್ವಾಮಿ, ಆನಂದ್, ನರಸಿಂಹಮೂರ್ತಿ, ಗಂಗಾಧರ್, ಬಲರಾಮ್, ರಾಮು, ಸರಳ, ಪ್ರಿಯಾಂಕ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!