21.5 C
Sidlaghatta
Thursday, July 31, 2025

ಸೈನಿಕರ ಹೋರಾಟದ ಫಲವೇ ಕಾರ್ಗಿಲ್ ವಿಜಯೋತ್ಸವ

- Advertisement -
- Advertisement -

ಪ್ರವಾಸಿಗರ ಸ್ವರ್ಗ ತಾಣವಾದ ಕಾಶ್ಮೀರದ ಕಾರ್ಗಿಲ್ ಪ್ರದೇಶದ ಮೇಲೆ 1999ರಲ್ಲಿ ನಡೆದ ಪಾಕಿಸ್ತಾನದ ಮೋಸದಿಂದ ದಾಳಿ ಮಾಡಿತು. ಈ ಕಾರ್ಗಿಲ್ ಕದನದಲ್ಲಿ ಕೆಚ್ಚೆದೆಯ ಹೋರಾಟ ನಡೆಸಿದ ಸೈನಿಕರ ಹೋರಾಟದ ಫಲವೇ ಕಾರ್ಗಿಲ್ ವಿಜಯೋತ್ಸವ. ನಿರಂತರ ದೇಶಸೇವೆಯಲ್ಲಿ ತೊಡಗಿರುವ ಸೈನಿಕರು ನಮ್ಮೆಲ್ಲರಿಗೂ ಪ್ರೇರಣಾದಾಯಿಗಳು ಎಂದು ಮುಖ್ಯ ಶಿಕ್ಷಕಿ ವೆಂಕಟರತ್ನಮ್ಮ ತಿಳಿಸಿದರು.
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕಾರ್ಗಿಲ್‌ ವಿಜಯ ದಿನವನ್ನು ಆಚರಿಸಿ ಅವರು ಮಾತನಾಡಿದರು.
ಸೇನೆಯ ಶೌರ್ಯವನ್ನು ಎಷ್ಟು ಹೊಗಳಿದರೂ ಸಾಕಾಗಲ್ಲ. ಅಂದು ಪಾಕಿಸ್ತಾನ ಕಾರಣವಿಲ್ಲದೇ ನಮ್ಮ ಮೇಲೆ ಬಂದಾಗ ಸೈನಿಕರು ತೋರಿದ ಕೆಚ್ಚೆದೆಯ ಹೋರಾಟ ಇತಿಹಾಸದಲ್ಲಿ ಅಜರಾಮರ ಎಂದು ಹೇಳಿದರು.
ಶಿಕ್ಷಕರ ಚಾಂದ್‌ ಪಾಷ ಕಾರ್ಗಿಲ್‌ ಯುದ್ಧ ನಡೆದ ರೀತಿಯ ಬಗ್ಗೆ ಮಕ್ಕಳಿಗೆ ವಿವರಿಸಿದರು.
ಶಿಕ್ಷಕರಾದ ಅಶೋಕ್‌, ಭಾರತಿ, ಸಿಬ್ಬಂದಿ ವೆಂಕಟಮ್ಮ, ಮಂಜುಳಮ್ಮ, ಮುನಿರತ್ನಮ್ಮ,ಗ್ರಾಮಸ್ಥರಾದ ಸಂಪತ್ತು, ಮುನಿರಾಜು, ಶ್ರೀಕಾಂತ್‌, ನಯನ್‌, ಶ್ರೀನಾಥ್‌, ವಸಂತ್‌, ಮಧು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!