ಸ್ನೇಹ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ

- Advertisement -
- Advertisement -

ಅಖಂಡ ಕರ್ನಾಟಕದ ನಾಡು, ನುಡಿ, ಭಾಷೆ, ಕಲೆ, ಸಂಸ್ಕೃತಿಗಳ ಉಳಿವಿಗಾಗಿ ಎಲ್ಲಾ ಸಂಘಟನೆಗಳು ಸೇರಿದಂತೆ ಪ್ರತಿಯೊಬ್ಬ ಕನ್ನಡಿಗನೂ ಶ್ರಮವಹಿಸಬೇಕು ಎಂದು ಕನ್ನಡಪರ ಹೋರಾಟಗಾರ ಖ.ರಾ.ಖಂಡೇರಾವ್ ಹೇಳಿದರು.
ಪಟ್ಟಣದ ಹಳೇ ಅಂಚೆ ಕಚೇರಿ ರಸ್ತೆ ವೃತ್ತದಲ್ಲಿ ಪಟ್ಟಣದ ಸ್ನೇಹ ಯುವಕರ ಸಂಘದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ನಾಡಿನ ನೆಲ, ಜಲ, ಭಾಷೆಯ ವಿಷಯದಲ್ಲಿ ರಾಜ್ಯದ ಎಲ್ಲಾ ಸಂಘಟನೆಗಳು ಒಂದಾಗಿ ದುಡಿಯಬೇಕು ಎಂದ ಅವರು ಕನ್ನಡ ರಾಜ್ಯೋತ್ಸವವನ್ನು ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ವರ್ಷದುದ್ದಕ್ಕೂ ಆಚರಿಸುವಂತಾಗಬೇಕು. ಆಂಧ್ರಪ್ರದೇಶದ ಗಡಿ ಬಾಗದಲ್ಲಿರುವ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಮಕ್ಕಳಲ್ಲಿ ಕನ್ನಡ ಭಾಷೆಯ ಸೊಂಪನ್ನು ಬೆಳಸಲು ಮಕ್ಕಳ ಪೋಷಕರು ಸೇರಿದಂತೆ ಶಿಕ್ಷಕರು ಹೆಚ್ಚಿನ ಶ್ರಮವಹಿಸಬೇಕೆಂದರು.
ಸ್ನೇಹ ಯುವಕರ ಸಂಘದ ಎನ್.ಭರತ್, ಶ್ರೀನಿವಾಸ್, ಡಿ.ವಿ.ವೆಂಕಟೇಶ್, ಮಂಜುನಾಥ್, ಮುನಿರಾಜು, ಜೆ.ವಿ.ವೆಂಕಟಸ್ವಾಮಿ. ಅಪ್ಪೇಗೌಡನಹಳ್ಳಿ ತ್ಯಾಗರಾಜ್, ಸುನಿಲ್, ಗೋಪಿನಾಥ್, ನವೀನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!