ಬಹುಸಂಖ್ಯಾತ ಅನಕ್ಷರಸ್ಥರಿಂದಾಗಿ ಗ್ರಾಮಗಳು ಹಿಂದುಳಿದಿವೆ. ದೇಶದ ಅಭಿವೃದ್ಧಿಯಲ್ಲಿ ಸಾಕ್ಷರತೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಂಭಿಗಾನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಬಾಬು ಅಭಿಪ್ರಾಯಪಟ್ಟರು.
ತಾಲ್ಲೂಕಿನ ಹಾರಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಲೋಕಶಿಕ್ಷಣ ನಿರ್ದೇಶನಾಲಯ, ಕುಂಭಿಗಾನಹಳ್ಳಿ ಗ್ರಾಮಪಂಚಾಯತಿಗಳ ಆಶ್ರಯದಲ್ಲಿ ಸಾಕ್ಷರಭಾರತ್ ಯೋಜನೆಯಡಿ ಹಮ್ಮಿಕೊಂಡಿದ್ದ ಸ್ವಯಂಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮಪಂಚಾಯತಿ ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯ ರಾಮಸ್ವಾಮಿ, ಮುಖಂಡ ಚನ್ನರಾಯಪ್ಪ, ಎಸ್ಡಿಎಂಸಿ ಅಧ್ಯಕ್ಷ ಚನ್ನಕೃಷ್ಣಪ್ಪ, ಮುಖ್ಯತರಬೇತುದಾರ ರಮೇಶ್ಕುಮಾರ್, ಜೆ.ಬಿ.ಅಶೋಕ್ಕುಮಾರ್, ಎಚ್.ಎಸ್.ರುದ್ರೇಶಮೂರ್ತಿ, ಪ್ರೇರಕಿ ಅನುಷಾ, ಕೆ.ಎಂ.ಬೇಬಿ ಮತ್ತಿತರರು ಇದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







