17.1 C
Sidlaghatta
Saturday, December 27, 2025

ಸ್ವಾಮಿ ವಿವೇಕಾನಂದರ 155ನೇ ಜಯಂತ್ಯುತ್ಸವ

- Advertisement -
- Advertisement -

ರಾಮಕೃಷ್ಣರಿಂದ ಸ್ವಾಮಿ ವಿವೇಕಾನಂದರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು. ‘ದರಿದ್ರ ನಾರಾಯಣ ಸೇವೆ’ ಎಂಬ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು ಎಂದು ರಾಮಕೃಷ್ಣಾಶ್ರಮದ ಪೂರ್ಣಾನಂದ ಸ್ವಾಮೀಜಿ ತಿಳಿಸಿದರು.
ತಾಲ್ಲೂಕಿನ ಮಳ್ಳೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿವೇಶನದ ಆವರಣದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ 155ನೇ ಜಯಂತ್ಯುತ್ಸವದ ಆಚರಣೆಯಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದರು.
ದೇಶವನ್ನು ಮುನ್ನಡೆಸಲು ಸಶಕ್ತವಾದ ಯುವಪಡೆಯನ್ನು ನಿರ್ಮಿಸುವುದೇ ನನ್ನ ಗುರಿ ಎನ್ನುತ್ತಿದ್ದರು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಮಾನಸಿಕ, ದೈಹಿಕ, ಅಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಎಂದು ಯುವಕರಿಗೆ ಕರೆ ನೀಡಿದ್ದರು. ಇಂದು ವಿವೇಕವಾಣಿಯ ಒಂದಿಷ್ಟು ಅಂಶ ನಮ್ಮ ಯುವ ಪೀಳಿಗೆಗೆ ಅರ್ಥವಾದರೆ ಭಾರತೀಯ ಸಂಸ್ಕೃತಿಯ ಉಳಿಸಿ, ಬೆಳಸಲು ಸಾಧ್ಯವಾಗುತ್ತದೆ. ಸ್ವಾಮಿ ವಿವೇಕಾನಂದರು ತಮ್ಮ ವ್ಯಕ್ತಿತ್ವ, ವಿಚಾರಧಾರೆ ಮೂಲಕ ಸ್ವತಂತ್ರ ನವ ಭಾರತ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿದರು ಎಂದು ಹೇಳಿದರು.
ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಮಾತ್ರವಲ್ಲ, ಇಡೀ ಜಗತ್ತು ಬಹಳ ಗೌರವದಿಂದ ನೆನಪಿಸಿಕೊಳ್ಳುತ್ತದೆ. ವಿವೇಕಾನಂದರ ಜೀವನ ಮೌಲ್ಯಗಳು ಹಾಗೂ ಸಂದೇಶಗಳು ಅನುಕರಣೀಯ ಎಂದರು.
ಮಳ್ಳೂರು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಿಂದ ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕೊಂಡೊಯ್ದರು.
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ರಾಮಾಂಜಿನಪ್ಪ, ಪ್ರಾಂಶುಪಾಲ ಚಂದ್ರಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಶಿವಕುಮಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ನರಸಿಂಹಮೂರ್ತಿ, ಮಳ್ಳೂರು ಹರೀಶ್, ಆನೂರು ದೇವರಾಜ್, ನಂಜೇಗೌಡ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!