26.1 C
Sidlaghatta
Saturday, June 7, 2025

ಸ್ವಾವಲಂಬಿಗಳಾಗಿ ಜೀವನ ನಡೆಸಬೇಕು

- Advertisement -
- Advertisement -

ಡಿ.ಸಿ.ಸಿ.ಬ್ಯಾಂಕಿನ ಮೂಲಕ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ ಸಾಲಗಳನ್ನು ನಿಗದಿತ ಅವಧಿಯಲ್ಲಿ ಮರುಫಾವತಿ ಮಾಡುವುದರ ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಬೇಕು ಎಂದು ಡಿ.ಸಿ.ಸಿ.ಬ್ಯಾಂಕ್ ಜಿಲ್ಲಾಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ಹೇಳಿದರು.
ನಗರದ ಡಿ.ಸಿ.ಸಿ.ಬ್ಯಾಂಕಿನಲ್ಲಿ ಆಯೋಜನೆ ಮಾಡಲಾಗಿದ್ದ ಸಾಲವಿತರಣೆ ಕಾರ್ಯಕ್ರಮದಲ್ಲಿ 07 ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಸುಮಾರು 35 ಲಕ್ಷ ರೂಪಾಯಿಗಳ ಸಾಲವನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ಮಹಿಳೆಯರ ಸಬಲೀಕರಣವಾದಾಗ ಮಾತ್ರ ರಾಷ್ಟ್ರದ ಸಮಗ್ರ ಅಭಿವೃದ್ಧಿಯಾಗಲು ಸಹಕಾರಿಯಾಗುತ್ತದೆ ಎಂದು ತತ್ವದಡಿಯಲ್ಲಿ ಡಿ.ಸಿ.ಸಿ.ಬ್ಯಾಂಕಿನ ಮೂಲಕ ಮಹಿಳಾ ಸ್ವಸಹಾಯ ಸಂಘಗಳಿಗೆ ಅವರ ಬ್ಯಾಂಕ್ ಖಾತೆಯ ಉಳಿತಾಯ ಮೊತ್ತಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚು ಸಾಲವನ್ನು ನೀಡಲಾಗುತ್ತಿದ್ದು, ನಗದು ರೂಪದಲ್ಲೆ ಅವರಿಗೆ ವಿತರಣೆ ಮಾಡಲಾಗುತ್ತಿದೆ, ಜಿಲ್ಲೆಯಲ್ಲಿ ಸುಮಾರು 250 ಕೋಟಿ ರೂಪಾಯಿಗಳ ಸಾಲಗಳನ್ನು ವಿತರಣೆ ಮಾಡುವ ಮೂಲಕ ಪ್ರತಿಯೊಂದು ಕುಟುಂಬವು ಆರ್ಥಿಕವಾಗಿ ಅಭಿವೃದ್ಧಿಯಾಗಬೇಕೆನ್ನುವ ಉದ್ದೇಶದಿಂದ ವಿತರಣೆ ಮಾಡಲಾಗುತ್ತಿದೆ, ನಗರದ ಎಸ್.ಎಫ್.ಸಿ.ಎಸ್ ಬ್ಯಾಂಕಿಗೂ ಕೂಡಾ 3 ಕೋಟಿ ರೂಪಾಯಿಗಳ ಸಾಲಗಳನ್ನು ವಿತರಣೆ ಮಾಡಲಾಗಿದ್ದು, ಪಡೆದುಕೊಂಡಿದ್ದ ಸಾಲವನ್ನು 2.65 ಕೋಟಿ ಮರುಪಾವತಿ ಮಾಡುವ ಮೂಲಕ ಆಡಳಿತ ಮಂಡಳಿ ಮೆಚ್ಚುಗೆಗೆ ಪಾತ್ರವಾಗಿದೆ, ಪುನಃ 1.5 ಕೋಟಿ ರೂಪಾಯಿಗಳ ಸಾಲವನ್ನು ನೀಡಲಾಗುತ್ತಿದೆ, ರೈತರಿಗೂ ಕೂಡಾ ಪಾಲಿಹೌಸ್ ನಿರ್ಮಾಣಕ್ಕಾಗಿ ಡಿ.ಸಿ.ಸಿ.ಬ್ಯಾಂಕಿನಿಂದ ಸಹಾಯಧನವನ್ನು ನೀಡಲಾಗುತ್ತದೆ, ರೈತರಿಂದ ಯಾವುದೇ ಶೂರಿಟಿ ಇಲ್ಲದೆ ಸಾಲವನ್ನು ವಿತರಣೆ ಮಾಡಲಾಗುತ್ತದೆ, ಯಾವ ರೈತರು ಬೇಕಾದರೂ ಸಾಲವನ್ನು ಪಡೆದುಕೊಳ್ಳಬಹುದಾಗಿದೆ, 10 ಗುಂಟೆ ಜಮೀನಿರುವ ರೈತರು ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದ್ದು, ಈ ಮೂಲಕ ನಿರುದ್ಯೋಗಿ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ಉದ್ದೇಶವನ್ನು ಬ್ಯಾಂಕ್ ಹೊಂದಿದೆ, ಪರಿಶಿಷ್ಟ ಜಾತಿ/ಪಂಗಡ ರೈತರಿಗೆ ಶೇ 90 ರಷ್ಟು ಸಹಾಯಧನ, ಸಾಮಾನ್ಯ ವರ್ಗದ ರೈತರಿಗೆ ಶೇ 75 ರಷ್ಟು ಸಹಾಯಧನ ನೀಡಲಾಗುತ್ತದೆ, ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳ, ರಾಜ್ಯಗಳಿಂದ ಬರುವಂತಹ ಖಾಸಗಿ ಫೈನಾನ್ಸ್ ಕಂಪನಿಗಳು ಸ್ವಸಹಾಯ ಸಂಘಗಳಿಗೆ ಸಾಲಗಳನ್ನು ನೀಡಿ, ಚಕ್ರಬಡ್ಡಿಯ ಸಮೇತವಾಗಿ ಹಣವನ್ನು ವಸೂಲಿ ಮಾಡುತ್ತಿರುವ ದಂಧೆಯನ್ನು ಸ್ಥಗಿತಗೊಳಿಸುವುದು ಮೂಲ ಉದ್ದೇಶವಾಗಿದೆ, ಎಲ್ಲಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ನೇರವಾಗಿ ಡಿ.ಸಿ.ಸಿ.ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕುಗಳಲ್ಲಿ ಖಾತೆಗಳನ್ನು ತೆರೆದು ವ್ಯವಹರಿಸಬೇಕು ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಮಹಿಳೆಯರು ಡಿ.ಸಿ.ಸಿ.ಬ್ಯಾಂಕುಗಳು ಮೂಲಕ ಸಿಗುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬನೆಯ ಜೀವನ ನಡೆಸಬೇಕು, ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಬ್ಯಾಂಕುಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು, ಮಹಿಳೆಯರು ಪಡೆದುಕೊಳ್ಳುವ ಸಾಲದ ಹಣವನ್ನು ದುರುಪಯೋಗಪಡಿಸಿಕೊಳ್ಳದೆ, ಉಪಕಸುಬುಗಳನ್ನು ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿಹೊಂದಬೇಕು, ಗುಡಿಕೈಗಾರಿಕೆಗಳನ್ನು ಸ್ಥಾಪನೆ ಮಾಡಿ, ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದರು.
ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಪಿ.ಶಿವಾರೆಡ್ಡಿ, ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ಹುಜುಗೂರು ರಾಮಣ್ಣ, ಎಸ್.ಎಫ್.ಸಿ.ಬ್ಯಾಂಕಿನ ಅಧ್ಯಕ್ಷ ರಾಮಚಂದ್ರಪ್ಪ, ನಿರ್ದೇಶಕರಾದ ವೆಂಕಟೇಶಪ್ಪ, ಲಕ್ಷ್ಮೀನಾರಾಯಣಪ್ಪ, ನಾರಾಯಣಸ್ವಾಮಿ, ಹಾಗೂ ಸಿಬ್ಬಂದಿ, ಆನಂದ್, ನಾಗರಾಜಪ್ಪ, ಗೋಪಾಲ್, ಲಿಂಗರಾಜು, ಚಿದಾನಂದ, ಚಿನ್ನಪ್ಪ, ಇನ್ನಿತರರು ಇದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!