ಶಿಡ್ಲಘಟ್ಟ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಬೋದಗೂರು ಚಂದ್ರೇಗೌಡ ಹಾಗೂ ಉಪಾಧ್ಯಕ್ಷರಾಗಿ ಎಸ್.ಗುಂಡ್ಲಹಳ್ಳಿ ರಾಮದಾಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬೋದಗೂರು ಚಂದ್ರೇಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ಗುಂಡ್ಲಹಳ್ಳಿ ರಾಮದಾಸ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಚುನಾವಣಾಧಿಕಾರಿ ಎಂ.ವಿ.ವೆಂಕಟೇಶ್ಮೂರ್ತಿ ನಾಮಪತ್ರಗಳನ್ನು ಪರಿಶೀಲಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷ ಹಾಗು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಯಾದಂತೆ ಘೋಷಿಸಿದರು.
ಆಡಳಿತ ಮಂಡಳಿ ನಿರ್ದೇಶಕರಾದ ಎನ್.ಗೋವಿಂದರಾಜು, ಕೆ.ವಿ.ಚೌಡರೆಡ್ಡಿ, ಎಂ.ಮುನಿರೆಡ್ಡಿ, ವಿ.ಕೃಷ್ಣಪ್ಪ, ಜಿ.ಎಂ.ದೇವರಾಜ, ಕೆ.ಎಂ.ರಾಮು, ಬೈರಪ್ಪ, ಆಂಜಿನಪ್ಪ.ಎಂ. ಮುನಿರಾಜು ಮತ್ತು ಮಹಿಳಾ ನಿರ್ದೇಶಕರಾದ ರತ್ನಮ್ಮ ಹಾಗೂ ಟಿ.ವಿ.ಸಾವಿತ್ರಮ್ಮ ಹಾಜರಿದ್ದರು.
- Advertisement -
- Advertisement -
- Advertisement -







