19.1 C
Sidlaghatta
Wednesday, December 31, 2025

ಹಾಳಾದ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರಿಂದ ಪ್ರತಿಭಟನೆ

- Advertisement -
- Advertisement -

ಹಾಳಾದ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅಮ್ಮಗಾರಹಳ್ಳಿ ಗೇಟ್ ನಲ್ಲಿ ಅಮ್ಮಗಾರಹಳ್ಳಿ, ದ್ಯಾವರಹಳ್ಳಿ ಮತ್ತು ಆನೂರು ತಿಮ್ಮನಹಳ್ಳಿ ಗ್ರಾಮಸ್ಥರು ಶನಿವಾರ ಧರಣಿ ನಡೆಸಿದರು.
ಶಿಡ್ಲಘಟ್ಟ ದಿಬ್ಬೂರಹಳ್ಳಿ ಮಾರ್ಗದಲ್ಲಿರುವ ಬಶೆಟ್ಟಹಳ್ಳಿ ಪಂಚಾಯಿತಿ ವ್ಯಾಪ್ತಿಯ ಅಮ್ಮಗಾರಹಳ್ಳಿ ಗೇಟ್ ನಿಂದ ದ್ಯಾವರಹಳ್ಳಿ ಮತ್ತು ಆಮೂರು ತಿಮ್ಮನಹಳ್ಳಿ ಗ್ರಾಮಗಳ ಮೂಲಕ ಶಿಡ್ಲಘಟ್ಟ ಚಿಕ್ಕಬಳ್ಳಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಸರಿಪಡಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಭಾರತ್ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಮೂರೂ ಗ್ರಾಮಗಳ ಗ್ರಾಮಸ್ಥರು ಅಮ್ಮಗಾರಹಳ್ಳಿ ಗೇಟ್ ಬಳಿ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಮ್ಮ ಅಹವಾಲನ್ನು ಆಲಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿ, ಸಮಸ್ಯೆಯನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಒಂದು ತಿಂಗಳ ಒಳಗೆ ರಸ್ತೆ ಕಾಮಗಾರಿಗೆ ಅನುಮೋದನೆ ಪಡೆಯುವುದಾಗಿ ಭರವಸೆ ನೀಡಿದರು.
ಭಾರತ್ ರಕ್ಷಣಾ ವೇದಿಕೆಯ ಸದಾನಂದ, ಮಾಣಿಕ್ಯಾಚಾರಿ, ಶ್ರೀನಾಥ್, ಸುನಿಲ್ ಕುಮಾರ್, ಬಾಬಾಜಾನ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!