ಹಿತ್ತಲಹಳ್ಳಿಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ

- Advertisement -
- Advertisement -

ತಾಲ್ಲೂಕಿನ ಹಿತ್ತಲಹಳ್ಳಿಯಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವವನ್ನು ಶುಕ್ರವಾರ ವಿಜೃಂಭಣೆಯಿಂದ ನಡೆಸಲಾಯಿತು. ಶುಭ ಮಿಥುನ ಲಗ್ನ ಸಮಯ ಶುಭ ಮುಹೂರ್ತದಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಮುಖ್ಯಪ್ರಾಣದೇವರ, ಮಹಾಗಣಪತಿ ಹಾಗೂ ಆಂಜನೇಯಸ್ವಾಮಿ ದೇವರುಗಳ ಪ್ರತಿಷ್ಠಾಪನೆಯನ್ನು ನಡೆಸಲಾಯಿತು.
ಗುರುವಾರ ಪ್ರತಿಷ್ಠಾಪನಾ ಹೋಮ, ವಾಸ್ತು ಹೋಮ, ಸುದರ್ಶನ ಹೋಮವನ್ನು ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಮೈಸೂರಿನ ಪಂಡಿತ ಮಾಧವಾಚಾರ್ಯ ಮತ್ತು ತಂಡದವರ ನೇತೃತ್ವದಲ್ಲಿ ಪೂಜೆ, ಹೋಮಗಳು ನಡೆದವು. ಗ್ರಾಮಸ್ಥರು ಪೂಜಾ ವಿಧಿಗಳಲ್ಲಿ ಭಾಗಿಯಾಗಿದ್ದರು. ಪ್ರತಿಷ್ಠಾಪನಾ ಪೂಜೆಯಲ್ಲಿ ಸುತ್ತ ಮುತ್ತಲಿನ ಗ್ರಾಮಗಳು ಹಾಗೂ ನಗರಗಳಿಂದ ಭಕ್ತರು ಆಗಮಿಸಿದ್ದರು.
ಮಹಾಪೂಜೆ, ಮಹಾಮಂಗಳಾರತಿಯ ನಂತರ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಸಂಸದ, ಕೋಲಾರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ, ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ಪುಟ್ಟು, ಎ.ಪಿ.ಎಂ.ಸಿ ಉಪಾಧ್ಯಕ್ಷ ಬೆಳ್ಳೂಟಿ ವೆಂಕಟೇಶ್, ನಿವೃತ್ತ ಕೆ.ಎಸ್.ಆರ್.ಟಿ.ಸಿ ಅಧಿಕಾರಿ ತಾದೂರು ವೆಂಕಟರೆಡ್ಡಿ, ಕಂಬದಹಳ್ಳಿ ನಾರಾಯಣರೆಡ್ಡಿ ಅವರನ್ನು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಚ್.ಎಂ.ಕೃಷ್ಣಪ್ಪ, ಸದಸ್ಯರು, ಪ್ರಧಾನ ಅರ್ಚಕ ಬಿ.ಕೃಷ್ಣಮೂರ್ತಿ, ಗ್ರಾಮಸ್ಥರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!